Internal reservation
ಮೈಸೂರು : ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 9 ಲಕ್ಷ ಮಂದಿ ತಮ್ಮ ಜಾತಿಯನ್ನು ನಮೂದಿಸಿಲ್ಲ. ಇದರಿಂದ ಸಮುದಾಯದ ಆಸ್ತಿ ಬೇರೆಯವರ ಪಾಲಾಗಲಿದೆ ಎಂದು ಗಾಂಧಿನಗರದ ಶ್ರೀ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಅಶೋಕ ವೃತ್ತದಲ್ಲಿರುವ ವಿಶ್ವಮೈತ್ರಿ ಬುದ್ಧ ವಿಹಾರದಲ್ಲಿ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಡಾ.ಶ್ರೀ ಜ್ಞಾನ ಸ್ವರೂಪಾನಂದ ಸ್ವಾಮೀಜಿ ಅವರ ಪ್ರಥಮ ವರ್ಷದ ಸನ್ಯಾಸ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ನಡೆದ ಸಮಾಜದ ಏಳಿಗೆಗಾಗಿ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ ಸುಮಾರು 9.60 ಲಕ್ಷ ಮಂದಿ ತಮ್ಮ ಜಾತಿಯನ್ನು ನಮೂದಿಸಿಲ್ಲ ಎಂದರೆ, ಯಾವ ಕಡೆಗೆ ಪರಿಶಿಷ್ಟ ಸಮುದಾಯ ಸಾಗುತ್ತಿದ್ದೆ ಎಂಬುದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ. ನಮ್ಮವರೇ ನಮ್ಮ ಸಮಾಜವನ್ನು ಸಮಾಽ ಮಾಡಲು ಹೋರಟಿದ್ದಾರೆಯೇ ಎಂದು ಪ್ರಶ್ನಿಸಿದರು.
ನಮ್ಮ ಸಮುದಾಯಕ್ಕೆ ಇಂದು ಗಂಭಿರವಾದ ಸಮಸ್ಯೆ ಎದುರಾಗಿದೆ. ಸರ್ಕಾರ ಈಗಾಗಲೇ ನಾಗಮೋಹನ ದಾಸ್ ವರದಿಯನ್ನು ಅಂಗೀಕರಿಸಿದೆ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ರಾಜ್ಯ ಸುತ್ತಿ ಸೆಮಿನಾರ್ ಮಾಡಿದರೂ ನಮ್ಮ ಜನ ಎಚ್ಚೆತ್ತುಕೊಳ್ಳಲಿಲ್ಲ ಎಂದರು.
ಬೆಂಗಳೂರು ನಗರದಲ್ಲೇ 7 ಲಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ 2 ಲಕ್ಷ ಜನ ಜಾತಿ ನಮೂದಿಸಿಲ್ಲ. ಇದರಿಂದಾಗಿ ಸಮುದಾಯದ ಆಸ್ತಿ ಅನ್ಯ ಸಮುದಾಯದ ಪಾಲಾಗುವಲ್ಲಿ ಯಾವುದೇ ಸಂಶಯವಿಲ್ಲ. ಸಮಾಜದ ಹಿತವನ್ನು ಕಾಯಬೇಕಾದ ಮುಂಚೂಣಿ ನಾಯಕರು, ಸಮುದಾಯವನ್ನು ರಕ್ಷಿಸಬೇಕಾದವರು ಕೈ ಚೆಲ್ಲಿ ಕುಳಿತರೆ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು 1924 ರಲ್ಲಿ ಬಹಿಷ್ಕೃತ ಹಿತಕಾರಣಿ ಸಭೆಯಲ್ಲಿಯೇ ಶಿಕ್ಷಣ ಪಡೆದುಕೊಳ್ಳಬೇಕು, ಸಂಘಟಿತರಾಗಬೇಕು ಹಾಗೂ ಸಕ್ರಿಯವಾಗಿ ಹೋರಾಟ ಮಾಡಬೇಕೇಂದು ಕರೆ ನೀಡಿದ್ದರು. ಆದರೆ, ಎಲ್ಲಾ ಜಾತಿ-ಸಮುದಾಯಗಳು ಒಗ್ಗಟ್ಟಿನ ಮಂತ್ರ ಜಪಿಸುವಾಗ ನಾವುಗಳು ಯಾವ ಕಡೆಗೆ ಚಲಿಸುತ್ತಿದ್ದೇವೆ ಎಂಬುದರ ಬಗ್ಗೆ ಚಿಂತಿಸಬೇಕಿದೆ. ರಾಜಕೀಯ ಅಸ್ಪಷ್ಟತೆಯಿಂದ ಸಮುದಾಯದ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದರು.
ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫಲಾನುಭವಿಗಳು. ಬಾಬಾ ಸಾಹೇಬರು ಹೇಳಿರುವಂತಹ ಬುದ್ಧ ಧಮ್ಮ ಹಾಗೂ ಸಂಘಕ್ಕೆ ಶರಣಾಗಲಿಲ್ಲವೆಂದರೆ ನಾವು ಅವರಿಗೆ ಮಾಡಿದ ದ್ರೋಹವಾಗಲಿದೆ. ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಡಾ.ಶ್ರೀ ಜ್ಞಾನ ಸ್ವರೂಪಾನಂದ ಸ್ವಾಮೀಜಿ, ಮಾಜಿ ಮಹಾಪೌರ ಪುರುಷೋತ್ತಮ್, ಮುಖಂಡ ಮಹಾದೇವ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…
ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…
ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…