ಮೈಸೂರು

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಸೆಸ್ಕ್ ಮತ್ತು ಕೆಪಿಟಿಸಿಎಲ್ ವತಿಯಿಂದ 408.95 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಪ್ರಮುಖ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ‌ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರುಗಳ ಸಮ್ಮುಖದಲ್ಲಿ ಸೆಸ್ಕ್ ನ ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಪ್ರಮುಖವಾಗಿ ಸೆಸ್ಕ್ ವತಿಯಿಂದ ಮೈಸೂರು ನಗರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 11 ಕೆವಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನು ಭೂಗತ ಕೇಬಲ್ ನಿಂದ ಬದಲಾಯಿಸುವುದು ಹಾಗೂ ಎಲ್.ಟಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನು ಏರಿಯಲ್ ಬಂಚ್ ಕೇಬಲ್ ನಿಂದ ಬದಲಿಸಲಾಗುತ್ತದೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರ(118.97 ಕೋಟಿ ರೂ.ಗಳು), ಚಾಮರಾಜ ವಿಧಾನಸಭಾ ಕ್ಷೇತ್ರ(125.51 ಕೋಟಿ ರೂ.ಗಳು), ನರಸಿಂಹರಾಜ ವಿಧಾನಸಭಾ ಕ್ಷೇತ್ರ(103.74 ಕೋಟಿ ರೂ.ಗಳು) ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ 60.73 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸದರಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಕೆಪಿಟಿಸಿಎಲ್ ನ 38.78 ಕೋಟಿ ರೂ.ಗಳ ಕಾಮಗಾರಿ
ಇದೇ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ವತಿಯಿಂದ ಹುಣಸೂರು ತಾಲೂಕಿನಲ್ಲಿ ಕೈಗೊಳ್ಳಲಾಗುತ್ತಿರುವ 38.73 ಕೋಟಿ ರೂ.ಗಳ ಎರಡು ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ 66/11ಕೆವಿ, 2X20 ಎಂವಿ ಉಪ ಕೇಂದ್ರ(20.41 ಕೋಟಿ ರೂ.ಗಳು) ಹಾಗೂ ಕಟ್ಟೆಮಳಲವಾಡಿಯಲ್ಲಿ 66/11ಕೆವಿ, 2X20 ಎಂವಿ ಉಪ ಕೇಂದ್ರ(18.32 ಕೋಟಿ ರೂ.ಗಳು) ನಿರ್ಮಾಣ ಕಾಮಗಾರಿಗಳು ಒಳಗೊಂಡಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

2 seconds ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

3 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

3 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

4 hours ago