ಮೈಸೂರು: ಜನವರಿ 22ರಂದು ನಡೆಯಲಿರುವ ಶ್ರೀರಾಮನ ಭವ್ಯ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ವಾಸವಿ ಟ್ರಸ್ಟ್ ವತಿಯಿಂದ ನಾಳೆ (ಸೋಮವಾರ) ಮೈಸೂರಿನಲ್ಲಿ ಶ್ರೀರಾಮನ ಮೂರ್ತಿಗೆ ಸಪ್ತ ನದಿಗಳ ನೀರಿನಿಂದ ಜಲಾಭಿಷೇಕ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶ್ರೀರಾಮನ ಮೂರ್ತಿಯ ಅಭಿಷೇಕಕ್ಕೆ ಕಾವೇರಿ, ಕಪಿಲಾ, ನರ್ಮಾದಾ, ಸಿಂಧು, ಗಂಗಾ, ಸರಯೂ, ಯುಮುನಾ ಸಪ್ತ ನದಿಗಳ ನೀರನ್ನು ಸಂಗ್ರಹಿಸಿದ್ದು, ವಾಸವಿ ಟ್ರಸ್ಟ್ ಜಲಾಭಿಷೇಕಕ್ಕೆ ಸಕಲ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಅದೇ ಸಮಯಕ್ಕೆ ಮೈಸೂರಿನ ದೇವಾಲಯದಲ್ಲೂ ಪ್ರಭು ಶ್ರೀರಾಮನಿಗೆ ಜಲಾಭೀಷೇಕ ನೆರವೇರಿಸಲಾಗುತ್ತದೆ. ಇದರೊಂದಿಗೆ ಪಂಚಾಮೃತ ಅಭಿಷೇಕ, 1,08,000 ತುಳಸಿ ದಳದಿಂದ ತೆಗೆದಿರುವ ರಸದಿಂದ ವಿಶೇಷ ಅಭಿಷೇಕವೂ ನೆರವೇರಲಿದೆ.
ಸೋಮವಾರ ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ಮೈಸೂರು ನಗರದ ಆಲಮ್ಮ ಛತ್ರದಲ್ಲಿ 102 ಬಗೆಯ ಆರತಿ ನೆರವೇರಿಸಲಾಗುತ್ತದೆ. ಅಯೋಧ್ಯೆ ಮತ್ತು ವಾರಣಾಸಿಯಿಂದ 102 ಬಗೆಯ ಆರತಿಗಳನ್ನು ತರಲಾಗಿದೆ. ಜೊತೆಗೆ ರಾಜ್ಯದಲ್ಲಿ ಬೆಳೆದಿರುವ ವಿಶೇಷ ಹೂಗಳಿಂದ ರಾಮನ ಅಲಂಕಾರವೂ ನಡೆಯಲಿದೆ ಎಂದು ವಾಸವಿ ಟ್ರಸ್ಟ್ ಸಿಬ್ಬಂದಿ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…