ಮೈಸೂರು: ಜನವರಿ 22ರಂದು ನಡೆಯಲಿರುವ ಶ್ರೀರಾಮನ ಭವ್ಯ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ವಾಸವಿ ಟ್ರಸ್ಟ್ ವತಿಯಿಂದ ನಾಳೆ (ಸೋಮವಾರ) ಮೈಸೂರಿನಲ್ಲಿ ಶ್ರೀರಾಮನ ಮೂರ್ತಿಗೆ ಸಪ್ತ ನದಿಗಳ ನೀರಿನಿಂದ ಜಲಾಭಿಷೇಕ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶ್ರೀರಾಮನ ಮೂರ್ತಿಯ ಅಭಿಷೇಕಕ್ಕೆ ಕಾವೇರಿ, ಕಪಿಲಾ, ನರ್ಮಾದಾ, ಸಿಂಧು, ಗಂಗಾ, ಸರಯೂ, ಯುಮುನಾ ಸಪ್ತ ನದಿಗಳ ನೀರನ್ನು ಸಂಗ್ರಹಿಸಿದ್ದು, ವಾಸವಿ ಟ್ರಸ್ಟ್ ಜಲಾಭಿಷೇಕಕ್ಕೆ ಸಕಲ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಅದೇ ಸಮಯಕ್ಕೆ ಮೈಸೂರಿನ ದೇವಾಲಯದಲ್ಲೂ ಪ್ರಭು ಶ್ರೀರಾಮನಿಗೆ ಜಲಾಭೀಷೇಕ ನೆರವೇರಿಸಲಾಗುತ್ತದೆ. ಇದರೊಂದಿಗೆ ಪಂಚಾಮೃತ ಅಭಿಷೇಕ, 1,08,000 ತುಳಸಿ ದಳದಿಂದ ತೆಗೆದಿರುವ ರಸದಿಂದ ವಿಶೇಷ ಅಭಿಷೇಕವೂ ನೆರವೇರಲಿದೆ.
ಸೋಮವಾರ ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ಮೈಸೂರು ನಗರದ ಆಲಮ್ಮ ಛತ್ರದಲ್ಲಿ 102 ಬಗೆಯ ಆರತಿ ನೆರವೇರಿಸಲಾಗುತ್ತದೆ. ಅಯೋಧ್ಯೆ ಮತ್ತು ವಾರಣಾಸಿಯಿಂದ 102 ಬಗೆಯ ಆರತಿಗಳನ್ನು ತರಲಾಗಿದೆ. ಜೊತೆಗೆ ರಾಜ್ಯದಲ್ಲಿ ಬೆಳೆದಿರುವ ವಿಶೇಷ ಹೂಗಳಿಂದ ರಾಮನ ಅಲಂಕಾರವೂ ನಡೆಯಲಿದೆ ಎಂದು ವಾಸವಿ ಟ್ರಸ್ಟ್ ಸಿಬ್ಬಂದಿ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…