ಮೈಸೂರು

ರಾಮಮಂದಿರ ಉದ್ಘಾಟನೆ: ಮೈಸೂರಲ್ಲಿ ಶ್ರೀರಾಮನಿಗೆ ಸಪ್ತ ನದಿಗಳ ನೀರಿನ ಜಲಾಭೀಷೇಕ!

ಮೈಸೂರು: ಜನವರಿ 22ರಂದು ನಡೆಯಲಿರುವ ಶ್ರೀರಾಮನ ಭವ್ಯ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ವಾಸವಿ ಟ್ರಸ್ಟ್‌ ವತಿಯಿಂದ ನಾಳೆ (ಸೋಮವಾರ) ಮೈಸೂರಿನಲ್ಲಿ ಶ್ರೀರಾಮನ ಮೂರ್ತಿಗೆ ಸಪ್ತ ನದಿಗಳ ನೀರಿನಿಂದ ಜಲಾಭಿಷೇಕ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶ್ರೀರಾಮನ ಮೂರ್ತಿಯ ಅಭಿಷೇಕಕ್ಕೆ ಕಾವೇರಿ, ಕಪಿಲಾ, ನರ್ಮಾದಾ, ಸಿಂಧು, ಗಂಗಾ, ಸರಯೂ, ಯುಮುನಾ ಸಪ್ತ ನದಿಗಳ ನೀರನ್ನು ಸಂಗ್ರಹಿಸಿದ್ದು, ವಾಸವಿ ಟ್ರಸ್ಟ್ ಜಲಾಭಿಷೇಕಕ್ಕೆ‌ ಸಕಲ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಅದೇ ಸಮಯಕ್ಕೆ ಮೈಸೂರಿನ ದೇವಾಲಯದಲ್ಲೂ ಪ್ರಭು ಶ್ರೀರಾಮನಿಗೆ ಜಲಾಭೀಷೇಕ ನೆರವೇರಿಸಲಾಗುತ್ತದೆ. ಇದರೊಂದಿಗೆ ಪಂಚಾಮೃತ ಅಭಿಷೇಕ, 1,08,000 ತುಳಸಿ ದಳದಿಂದ ತೆಗೆದಿರುವ ರಸದಿಂದ ವಿಶೇಷ ಅಭಿಷೇಕವೂ ನೆರವೇರಲಿದೆ.

ಸೋಮವಾರ ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ಮೈಸೂರು ನಗರದ ಆಲಮ್ಮ ಛತ್ರದಲ್ಲಿ 102 ಬಗೆಯ ಆರತಿ ನೆರವೇರಿಸಲಾಗುತ್ತದೆ. ಅಯೋಧ್ಯೆ ಮತ್ತು ವಾರಣಾಸಿಯಿಂದ 102 ಬಗೆಯ ಆರತಿಗಳನ್ನು ತರಲಾಗಿದೆ. ಜೊತೆಗೆ ರಾಜ್ಯದಲ್ಲಿ ಬೆಳೆದಿರುವ ವಿಶೇಷ ಹೂಗಳಿಂದ ರಾಮನ ಅಲಂಕಾರವೂ ನಡೆಯಲಿದೆ ಎಂದು ವಾಸವಿ ಟ್ರಸ್ಟ್‌ ಸಿಬ್ಬಂದಿ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

andolanait

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

27 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

37 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

45 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago