ಮೈಸೂರು: ಜನವರಿ 22ರಂದು ನಡೆಯಲಿರುವ ಶ್ರೀರಾಮನ ಭವ್ಯ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ವಾಸವಿ ಟ್ರಸ್ಟ್ ವತಿಯಿಂದ ನಾಳೆ (ಸೋಮವಾರ) ಮೈಸೂರಿನಲ್ಲಿ ಶ್ರೀರಾಮನ ಮೂರ್ತಿಗೆ ಸಪ್ತ ನದಿಗಳ ನೀರಿನಿಂದ ಜಲಾಭಿಷೇಕ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶ್ರೀರಾಮನ ಮೂರ್ತಿಯ ಅಭಿಷೇಕಕ್ಕೆ ಕಾವೇರಿ, ಕಪಿಲಾ, ನರ್ಮಾದಾ, ಸಿಂಧು, ಗಂಗಾ, ಸರಯೂ, ಯುಮುನಾ ಸಪ್ತ ನದಿಗಳ ನೀರನ್ನು ಸಂಗ್ರಹಿಸಿದ್ದು, ವಾಸವಿ ಟ್ರಸ್ಟ್ ಜಲಾಭಿಷೇಕಕ್ಕೆ ಸಕಲ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಅದೇ ಸಮಯಕ್ಕೆ ಮೈಸೂರಿನ ದೇವಾಲಯದಲ್ಲೂ ಪ್ರಭು ಶ್ರೀರಾಮನಿಗೆ ಜಲಾಭೀಷೇಕ ನೆರವೇರಿಸಲಾಗುತ್ತದೆ. ಇದರೊಂದಿಗೆ ಪಂಚಾಮೃತ ಅಭಿಷೇಕ, 1,08,000 ತುಳಸಿ ದಳದಿಂದ ತೆಗೆದಿರುವ ರಸದಿಂದ ವಿಶೇಷ ಅಭಿಷೇಕವೂ ನೆರವೇರಲಿದೆ.
ಸೋಮವಾರ ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ಮೈಸೂರು ನಗರದ ಆಲಮ್ಮ ಛತ್ರದಲ್ಲಿ 102 ಬಗೆಯ ಆರತಿ ನೆರವೇರಿಸಲಾಗುತ್ತದೆ. ಅಯೋಧ್ಯೆ ಮತ್ತು ವಾರಣಾಸಿಯಿಂದ 102 ಬಗೆಯ ಆರತಿಗಳನ್ನು ತರಲಾಗಿದೆ. ಜೊತೆಗೆ ರಾಜ್ಯದಲ್ಲಿ ಬೆಳೆದಿರುವ ವಿಶೇಷ ಹೂಗಳಿಂದ ರಾಮನ ಅಲಂಕಾರವೂ ನಡೆಯಲಿದೆ ಎಂದು ವಾಸವಿ ಟ್ರಸ್ಟ್ ಸಿಬ್ಬಂದಿ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…