ಮೈಸೂರು: ಜನವರಿ 22ರಂದು ನಡೆಯಲಿರುವ ಶ್ರೀರಾಮನ ಭವ್ಯ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ವಾಸವಿ ಟ್ರಸ್ಟ್ ವತಿಯಿಂದ ನಾಳೆ (ಸೋಮವಾರ) ಮೈಸೂರಿನಲ್ಲಿ ಶ್ರೀರಾಮನ ಮೂರ್ತಿಗೆ ಸಪ್ತ ನದಿಗಳ ನೀರಿನಿಂದ ಜಲಾಭಿಷೇಕ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶ್ರೀರಾಮನ ಮೂರ್ತಿಯ ಅಭಿಷೇಕಕ್ಕೆ ಕಾವೇರಿ, ಕಪಿಲಾ, ನರ್ಮಾದಾ, ಸಿಂಧು, ಗಂಗಾ, ಸರಯೂ, ಯುಮುನಾ ಸಪ್ತ ನದಿಗಳ ನೀರನ್ನು ಸಂಗ್ರಹಿಸಿದ್ದು, ವಾಸವಿ ಟ್ರಸ್ಟ್ ಜಲಾಭಿಷೇಕಕ್ಕೆ ಸಕಲ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಅದೇ ಸಮಯಕ್ಕೆ ಮೈಸೂರಿನ ದೇವಾಲಯದಲ್ಲೂ ಪ್ರಭು ಶ್ರೀರಾಮನಿಗೆ ಜಲಾಭೀಷೇಕ ನೆರವೇರಿಸಲಾಗುತ್ತದೆ. ಇದರೊಂದಿಗೆ ಪಂಚಾಮೃತ ಅಭಿಷೇಕ, 1,08,000 ತುಳಸಿ ದಳದಿಂದ ತೆಗೆದಿರುವ ರಸದಿಂದ ವಿಶೇಷ ಅಭಿಷೇಕವೂ ನೆರವೇರಲಿದೆ.
ಸೋಮವಾರ ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ಮೈಸೂರು ನಗರದ ಆಲಮ್ಮ ಛತ್ರದಲ್ಲಿ 102 ಬಗೆಯ ಆರತಿ ನೆರವೇರಿಸಲಾಗುತ್ತದೆ. ಅಯೋಧ್ಯೆ ಮತ್ತು ವಾರಣಾಸಿಯಿಂದ 102 ಬಗೆಯ ಆರತಿಗಳನ್ನು ತರಲಾಗಿದೆ. ಜೊತೆಗೆ ರಾಜ್ಯದಲ್ಲಿ ಬೆಳೆದಿರುವ ವಿಶೇಷ ಹೂಗಳಿಂದ ರಾಮನ ಅಲಂಕಾರವೂ ನಡೆಯಲಿದೆ ಎಂದು ವಾಸವಿ ಟ್ರಸ್ಟ್ ಸಿಬ್ಬಂದಿ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…