ಮೈಸೂರು

ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತರ ಸೇರ್ಪಡೆ ಸಂವಿಧಾನಬದ್ಧ : ಈಶ್ವರ ಖಂಡ್ರೆ

ಮೈಸೂರು : ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ಕಲ್ಪಿಸುವುದು ಸಂವಿಧಾನ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

ಹೆಚ್.ಡಿ ಕೋಟೆ ಮತ್ತು ಸರಗೂರು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಘಟಕದ ವತಿಯಿಂದ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಸಕಲ ಜೀವತ್ಮರಿಗೂ ಲೇಸನ್ನೇ ಬಯಸುವ ವೀರಶೈವ ಮತ್ತು ಲಿಂಗಾಯತ ಸಮುದಾಯ 12ನೇ ಶತಮಾನದಲ್ಲೇ ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಿತು. ಆದರೆ ಇಂದು ಸಮಾಜವೇ ಸಾಮಾಜಿಕ ನ್ಯಾಯ ಕೇಳುವ ಸ್ಥಿತಿ ಬಂದಿದೆ ಎಂದು ತಿಳಿಸಿದರು.

ಸಮಾನತೆಯ ಹರಿಕಾರ, ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ಮಾಡಿದ ಸುಧಾರಣೆ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದ ಅವರು, ಈ ರಾಜ್ಯಕ್ಕೆ ವೀರಶೈವ ಲಿಂಗಾಯತ ಮಠಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದದ್ದು ಎಂದು ಪ್ರತಿಪಾದಿಸಿದರು.

ಇವನಾರವ, ಇವನಾರವ ಎನಿಸದೆ, ಇವ ನಮ್ಮವ ಇವ ನಮ್ಮ ಎನ್ನುವ ಉದಾತ್ತ ಚಿಂತನೆಯನ್ನು ಬಸವಣ್ಣನವರು ನೀಡಿದ್ದಾರೆ. ನಾವು ಎಲ್ಲ ಜಾತಿ, ಜನಾಂಗ, ಸಮುದಾಯದವರನ್ನೂ ನಮ್ಮೊಂದಿಗೆ ತೆಗೆದುಕೊಂಡು ಮುಂದೆ ಸಾಗಬೇಕು ಎಂದು ಹೇಳಿದರು. ಮೂರನೆಯ ಬಾರಿಗೆ ಹೆಗ್ಗಡದೇವನಕೋಟೆಗೆ ತಾವು ಆಗಮಿಸಿದ್ದೇನೆ. ಪ್ರಸ್ತುತ ಅರಣ್ಯ ಸಚಿವನಾಗಿ ಶೇಕಡ 60ರಷ್ಟು ಅರಣ್ಯ ಸಂಪತ್ತಿರುವ ಈ ಭಾಗಕ್ಕೆ ಬಂದಿರುವುದು ಅತಿವ ಸಂತಸ ನೀಡಿದೆ ಎಂದರು.

ಪ್ರಕೃತಿ ಪರಿಸರವಿಲ್ಲದೆ ಮನುಷ್ಯನಿಲ್ಲ, ಇಂದು ಪ್ಲಾಸ್ಟಿಕ್ ತ್ಯಾಜ್ಯದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಹಸಿರು ವ್ಯಾಪ್ತಿ ಹೆಚ್ಚಿಸುವ ಅಗತ್ಯವಿದೆ ಕರ್ನಾಟಕದಲ್ಲಿ ಸರಾಸರಿ ಶೇಕಡ 21ರಷ್ಟು ಮಾತ್ರ ಹಸಿರು ವ್ಯಾಪ್ತಿ ಇದೆ, ಆದರೆ ಅತಿ ಹೆಚ್ಚು ಅರಣ್ಯ ಸಂಪತ್ತು ಹೊಂದಿರುವ ಈ ಭಾಗದ ಜನರು ಪುಣ್ಯವಂತರು ಎಂದರು.

ಬಸವಾದಿ ಶರಣರು ಸಾರಿರುವ ತತ್ವಗಳು ಅಮೂಲ್ಯವಾಗಿದ್ದು ಪ್ರತಿನಿತ್ಯ ನಮ್ಮ ಬದುಕಿನಲ್ಲಿ ಬಸವಣ್ಣನರು ಸಾರಿದ ತತ್ವವನ್ನು ಅನುಷ್ಠಾನ ಮಾಡಬೇಕು. ಆಗ ಬಸವ ಜಯಂತಿಗೆ ನಿಜ ಅರ್ಥ ಬರುತ್ತದೆ ಎಂದರು.

ಬುದ್ಧ, ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರುಗಳು ಸಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದಾರೆ. ನಮ್ಮ ಸರ್ಕಾರ ಆ ನಿರ್ದೇಶಕ ತತ್ವಗಳ ಮೇಲೆ ಆಡಳಿತ ನಡೆಸುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ತಂದಿದೆ ಎಂದರು
ಮನವ ಧರ್ಮ ದೊಡ್ಡದಲ್ಲ, ಮಾನವೀಯತೆಯೇ ದೊಡ್ಡದು ಎಂದು ಸಾರಿದ ಬಸವಣ್ಣನವರು ದಯೆಯೇ ಧರ್ಮದ ಮೂಲ ಎಂದಿದ್ದಾರೆ, ಬಸವಣ್ಣನವರ ವಿಚಾರಧಾರೆ ಸಾರ್ವಕಾಲಿಕ ಸತ್ಯವಾಗಿದೆ ಎಂದು ಹೇಳಿದರು.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಎಲ್ಲ 5 ಗ್ಯಾರೆಂಟಿಗಳನ್ನು ಈಡೇರಿಸುತ್ತಿದೆ ಅನ್ನಭಾಗ್ಯ ಯೋಜನೆಗೆ ನಮ್ಮ ಮಠಾಧೀಶರುಗಳು ಮಾಡುತ್ತಿರುವ ಅನ್ನದಾಸೋಹವೆ ಪ್ರೇರಣೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಚಿವರಾದ ಎಚ್.ಸಿ ಮಹದೇವಪ್ಪ, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವ ನಾರಾಯಣ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರು

lokesh

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

6 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

7 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

7 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

8 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

11 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

12 hours ago