ಮೈಸೂರು

ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಮೈಸೂರು: ಕಳೆದೆರಡು ವಾರಗಳಿಂದ  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬೇಸಿಗೆ ಬಿಸಿಲಿನಿಂದ ಒಣಗಿದ ಹಳ್ಳ, ಕೊಳ್ಳ, ನದಿಗಳೆಲ್ಲಾ ಮತ್ತೆ ಮರು ಜೀವ ಪಡೆದುಕೊಳ್ಳುತ್ತಿವೆ.

ಕಳೆದ ವರ್ಷ ಬರಿದಾಗಿದ್ದ ಕೆಆರ್‌ಎಸ್‌ ಅಣೆಕಟ್ಟಿಗೆ ಈ ವರ್ಷ ಭರಪೂರ ನೀರು ತುಂಬುವ ನಿರೀಕ್ಷೆ ಸಿಕ್ಕಿದೆ. ಮುಂಗಾರು ಆಗಮನಕ್ಕೆ ಮುನ್ನವೇ ಜಲಾಶಯದ ಒಳಹರಿವು ಹೆಚ್ಚಿದ್ದು, ದಿನಕಳೆದಂತೆ ಒಳಹರಿವಿನ ಪ್ರಮಾಣ ಹೆಚ್ಚುತ್ತಿದೆ.

ಜನವರಿ, ಫೆಬ್ರವರಿಗಳಲ್ಲಿ ಅಲ್ಪ ಪ್ರಮಾಣದ ನೀರನ್ನು ಕೆಆರ್‌ಎಸ್‌ ತನ್ನ ಒಡಲಲ್ಲಿರಿಸಿಕೊಂಡಿತ್ತು. ದಿನಕಳೆದಂತೆ ನೀರು ಬರಿದಾಗುತ್ತ ಹೋಯಿತು. ಈ ನಡುವೆ ಬೆಳೆ ರಕ್ಷಣೆಗೆ ಕಾಲುವೆಗಳಿಗೆ ನೀರು ಹರಿಸಿ ಎಂದು ರೈತ ಸಂಘಗಳು ಆಗ್ರಹಿಸಿದರು ಕಾವೇರಿ ನೀರಾವರಿ ಸಲಹಾ ಮಂಡಳಿ ಈ ಬೇಡಿಕೆಯನ್ನ ಸಾರಾಸಗಟಾಗಿ ತಳ್ಳಿ ಹಾಕಿ ಕೆಆರ್‌ಎಸ್ ನೀರು ಕೇವಲ ಕುಡಿಯಲು ಮಾತ್ರ ಬಳಸಲಾಗುವುದು ಎಂದು ಕಟ್ಟಪ್ಪಣೆ ಹೊರಡಿಸಿತ್ತು. ‌

ಮಾರ್ಚ್‌, ಏಪ್ರಿಲ್‌ ತಿಂಗಳಲ್ಲಿ ಕೆಆರ್‌ಎಸ್‌ ನಂಬಿದ್ದ ಜನರಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಯಿತು. ನೀರಿನ ಪ್ರಮಾಣ ಅತ್ಯಂತ ಕನಿಷ್ಠ ಮಟ್ಟ ಕುಸಿತ ಕಂಡು ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿತ್ತು. ಆದರೆ ಮೇ ತಿಂಗಳಲ್ಲಿ ರಾಜ್ಯ ಪ್ರವೇಶಿಸಿದ ಮುಂಗಾರು ಪೂರ್ವ ಮಳೆ ಇಂತ ಆತಂಕವನ್ನೆಲ್ಲಾ ದೂರ ಮಾಡಿದೆ.

ಮೇ 15 ರಲ್ಲಿ 903 ಕ್ಯೂಸೆಕ್ಸ್‌ ಇದ್ದ ಒಳಹರಿವು ಒಂದೇ ದಿನದಲ್ಲಿ ಎರಡುಪಟ್ಟು ಹೆಚ್ಚಾಗಿದ್ದು, ಮೇ 16ರಂದು 1771 ಕ್ಯೂಸೆಕ್ಸ್‌ ಏರಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಮೂನ್ಸೂಚನೆ ಇದೆ.

ಮೇ.16ರ ಬೆಳಿಗ್ಗೆ 8 ಗಂಟೆವರೆಗೆ 1771 ಒಳಹರಿವು ಇತ್ತು, ಹೊರ ಹರಿವು 153 ಕ್ಯೂಸೆಕ್‌ ನೀರು ಬಿಡಲಾಗಿದೆ. ಕೆಆರ್‌ಎಸ್‌ ಒಟ್ಟು 124.80 ಅಡಿ, 49.452 ಟಿಎಂಸಿ ನೀರು ಸಾಮಥ್ಯ ಹೊಂದಿದ್ದು, ಸದ್ಯ 80 ಅಡಿ, 10.895 ಕ್ಯೂಸೆಕ್ಸ್‌ ನೀರು ಸಂಗ್ರಹವಾಗಿದೆ.

ಭಾರಿ ಮಳೆ ಮೂನ್ಸೂಚನೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮೂನ್ಸುಚನೆ  ಇದೆ.  ಅಲ್ಲದೇ ಮೇ.31 ರಂದು ರಾಜ್ಯ ಪ್ರವೇಶಿಸುವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ  ಬಾರಿ ಉತ್ತಮ ಮಳೆಯಾಗಿ, ರಾಜ್ಯದ ಎಲ್ಲಾ ಅಣೆಕಟ್ಟೆಗಳು ತುಂಬುವ ನಿರೀಕ್ಷೆ ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

49 mins ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

55 mins ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

1 hour ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

1 hour ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

1 hour ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

2 hours ago