ಮೈಸೂರು

ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಮೈಸೂರು: ಕಳೆದೆರಡು ವಾರಗಳಿಂದ  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬೇಸಿಗೆ ಬಿಸಿಲಿನಿಂದ ಒಣಗಿದ ಹಳ್ಳ, ಕೊಳ್ಳ, ನದಿಗಳೆಲ್ಲಾ ಮತ್ತೆ ಮರು ಜೀವ ಪಡೆದುಕೊಳ್ಳುತ್ತಿವೆ.

ಕಳೆದ ವರ್ಷ ಬರಿದಾಗಿದ್ದ ಕೆಆರ್‌ಎಸ್‌ ಅಣೆಕಟ್ಟಿಗೆ ಈ ವರ್ಷ ಭರಪೂರ ನೀರು ತುಂಬುವ ನಿರೀಕ್ಷೆ ಸಿಕ್ಕಿದೆ. ಮುಂಗಾರು ಆಗಮನಕ್ಕೆ ಮುನ್ನವೇ ಜಲಾಶಯದ ಒಳಹರಿವು ಹೆಚ್ಚಿದ್ದು, ದಿನಕಳೆದಂತೆ ಒಳಹರಿವಿನ ಪ್ರಮಾಣ ಹೆಚ್ಚುತ್ತಿದೆ.

ಜನವರಿ, ಫೆಬ್ರವರಿಗಳಲ್ಲಿ ಅಲ್ಪ ಪ್ರಮಾಣದ ನೀರನ್ನು ಕೆಆರ್‌ಎಸ್‌ ತನ್ನ ಒಡಲಲ್ಲಿರಿಸಿಕೊಂಡಿತ್ತು. ದಿನಕಳೆದಂತೆ ನೀರು ಬರಿದಾಗುತ್ತ ಹೋಯಿತು. ಈ ನಡುವೆ ಬೆಳೆ ರಕ್ಷಣೆಗೆ ಕಾಲುವೆಗಳಿಗೆ ನೀರು ಹರಿಸಿ ಎಂದು ರೈತ ಸಂಘಗಳು ಆಗ್ರಹಿಸಿದರು ಕಾವೇರಿ ನೀರಾವರಿ ಸಲಹಾ ಮಂಡಳಿ ಈ ಬೇಡಿಕೆಯನ್ನ ಸಾರಾಸಗಟಾಗಿ ತಳ್ಳಿ ಹಾಕಿ ಕೆಆರ್‌ಎಸ್ ನೀರು ಕೇವಲ ಕುಡಿಯಲು ಮಾತ್ರ ಬಳಸಲಾಗುವುದು ಎಂದು ಕಟ್ಟಪ್ಪಣೆ ಹೊರಡಿಸಿತ್ತು. ‌

ಮಾರ್ಚ್‌, ಏಪ್ರಿಲ್‌ ತಿಂಗಳಲ್ಲಿ ಕೆಆರ್‌ಎಸ್‌ ನಂಬಿದ್ದ ಜನರಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಯಿತು. ನೀರಿನ ಪ್ರಮಾಣ ಅತ್ಯಂತ ಕನಿಷ್ಠ ಮಟ್ಟ ಕುಸಿತ ಕಂಡು ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿತ್ತು. ಆದರೆ ಮೇ ತಿಂಗಳಲ್ಲಿ ರಾಜ್ಯ ಪ್ರವೇಶಿಸಿದ ಮುಂಗಾರು ಪೂರ್ವ ಮಳೆ ಇಂತ ಆತಂಕವನ್ನೆಲ್ಲಾ ದೂರ ಮಾಡಿದೆ.

ಮೇ 15 ರಲ್ಲಿ 903 ಕ್ಯೂಸೆಕ್ಸ್‌ ಇದ್ದ ಒಳಹರಿವು ಒಂದೇ ದಿನದಲ್ಲಿ ಎರಡುಪಟ್ಟು ಹೆಚ್ಚಾಗಿದ್ದು, ಮೇ 16ರಂದು 1771 ಕ್ಯೂಸೆಕ್ಸ್‌ ಏರಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಮೂನ್ಸೂಚನೆ ಇದೆ.

ಮೇ.16ರ ಬೆಳಿಗ್ಗೆ 8 ಗಂಟೆವರೆಗೆ 1771 ಒಳಹರಿವು ಇತ್ತು, ಹೊರ ಹರಿವು 153 ಕ್ಯೂಸೆಕ್‌ ನೀರು ಬಿಡಲಾಗಿದೆ. ಕೆಆರ್‌ಎಸ್‌ ಒಟ್ಟು 124.80 ಅಡಿ, 49.452 ಟಿಎಂಸಿ ನೀರು ಸಾಮಥ್ಯ ಹೊಂದಿದ್ದು, ಸದ್ಯ 80 ಅಡಿ, 10.895 ಕ್ಯೂಸೆಕ್ಸ್‌ ನೀರು ಸಂಗ್ರಹವಾಗಿದೆ.

ಭಾರಿ ಮಳೆ ಮೂನ್ಸೂಚನೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮೂನ್ಸುಚನೆ  ಇದೆ.  ಅಲ್ಲದೇ ಮೇ.31 ರಂದು ರಾಜ್ಯ ಪ್ರವೇಶಿಸುವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ  ಬಾರಿ ಉತ್ತಮ ಮಳೆಯಾಗಿ, ರಾಜ್ಯದ ಎಲ್ಲಾ ಅಣೆಕಟ್ಟೆಗಳು ತುಂಬುವ ನಿರೀಕ್ಷೆ ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

20 mins ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

53 mins ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

4 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

4 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

4 hours ago