ಮೈಸೂರು : ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿ ಕಬಿನಿ ಜಲಾಶಯವಿದ್ದು, ಸಮುದ್ರ ಮಟ್ಟದಿಂದ 2284 ಅಡಿ ಎತ್ತರವಿದ್ದು, ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 2280.51 ಅಡಿಗಳಿಗೆ ಏರಿಕೆಯಾಗಿದ್ದು, ಕಬಿನಿ ಜಲಾಶಯದ ಇಂದಿನ ಒಳಹರಿವು 25896 ಕ್ಯೂಸೆಕ್ ಗೆ ಹೆಚ್ಚಳವಾಗಿದೆ. ಜಲಾಶಯದ ಹೊರ ಹರಿವು 11250 ಕ್ಯೂಸೆಕ್ ಇದೆ. ಒಟ್ಟು ಕಬಿನಿ ಜಲಾಶಯದಲ್ಲಿ 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಜಲಾಶಯದಲ್ಲಿಂದು 17.34 ಟಿಎಂಸಿ ನೀರು ಸಂಗ್ರಹವಾಗಿದೆ.
ಕಬಿನಿ ಜಲಾಶಯದ ಹೊರಹರಿವು ಯಾವುದೇ ಕ್ಷಣದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ಕಪಿಲಾ ನದಿಪಾತ್ರದ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…