ಮೈಸೂರು : ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿ ಕಬಿನಿ ಜಲಾಶಯವಿದ್ದು, ಸಮುದ್ರ ಮಟ್ಟದಿಂದ 2284 ಅಡಿ ಎತ್ತರವಿದ್ದು, ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 2280.51 ಅಡಿಗಳಿಗೆ ಏರಿಕೆಯಾಗಿದ್ದು, ಕಬಿನಿ ಜಲಾಶಯದ ಇಂದಿನ ಒಳಹರಿವು 25896 ಕ್ಯೂಸೆಕ್ ಗೆ ಹೆಚ್ಚಳವಾಗಿದೆ. ಜಲಾಶಯದ ಹೊರ ಹರಿವು 11250 ಕ್ಯೂಸೆಕ್ ಇದೆ. ಒಟ್ಟು ಕಬಿನಿ ಜಲಾಶಯದಲ್ಲಿ 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಜಲಾಶಯದಲ್ಲಿಂದು 17.34 ಟಿಎಂಸಿ ನೀರು ಸಂಗ್ರಹವಾಗಿದೆ.
ಕಬಿನಿ ಜಲಾಶಯದ ಹೊರಹರಿವು ಯಾವುದೇ ಕ್ಷಣದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ಕಪಿಲಾ ನದಿಪಾತ್ರದ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…