ಮೈಸೂರು

ಚಾಮುಂಡಿಬೆಟ್ಟಕ್ಕೆ ವಿಐಪಿಗಳ ಸಂಖ್ಯೆ ಹೆಚ್ಚಳ : ಧರ್ಮದರ್ಶನಕ್ಕೆ ತೊಡಕು

ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ ವಿಐಪಿಗಳ ಸರತಿ ಸಾಲು ಮಾರುದ್ದ ಇತ್ತು.

ದೇವಾಲಯದ ಗರ್ಭಗುಡಿಗೆ ತೆರಳಲೂ ಸರತಿ ಸಾಲಿನಲ್ಲಿ ನಿಂತಿದ್ದರು. ಇದರಿಂದ ಧರ್ಮ ದರ್ಶನಕ್ಕೆ ಮಂಜಾನೆಯಿಂದಲೇ ಸರತಿ ಸಾಲಿನಲ್ಲಿ ಬಂದಿದ್ದವರಿಗೆ ಸಮಸ್ಯೆಯಾಯಿತು. ಭಕ್ತರೊಂದಿಗೆ ವಿಐಪಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಜಿಲ್ಲಾಡಳಿತ ಈ ಬಾರಿ ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲವೆಂದು ಹೇಳಿತ್ತು.

ಆದರೆ, ಹೇಳಿದ್ದೇ ಒಂದು ಮಾಡಿದ್ದೇ ಒಂದು ಎಂಬಂತಿತ್ತು ಬೆಟ್ಟದಲ್ಲಿನ ಪರಿಸ್ಥಿತಿ. ಧರ್ಮದರ್ಶನದಲ್ಲಿ ದರ್ಶನಕ್ಕೆ ನಿಂತಿದ್ದ ಮಹಿಳೆಯರು ವಿವಿಐಪಿಗಳನ್ನು ಒಳಗೆ ಕಳುಹಿಸುತ್ತಿದ್ದಕ್ಕೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಪೊಲೀಸ್‌ ಸಿಬ್ಬಂದಿ ವಿರುದ್ಧ ಕಿಡಿಕಾರಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚಿತ್ರ ನಟ ಶಶಿಕುಮಾರ್‌, ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಗ್ಯಾರಂಟಿ ಯೋಜನೆ ಉಪಧ್ಯಾಕ್ಷ ಹೆಚ್.ಎಂ ರೇವಣ್ಣ, ಸಂಸದ ರಾಘವೇಂದ್ರ, ಬಿಜೆಪಿ ಶಾಸಕ ಶ್ರೀವತ್ಸ, ಜೆಡಿಎಸ್‌ ಶಾಸಕ ಎ.ಮಂಜು ಸೇರಿದಂತೆ ಅನೇಕ ವಿಐಪಿಗಳು ಕುಟುಂಬ ಸಮೇತ ದರ್ಶನ ಪಡೆದರು.

ಮೂರನೇ ಆಷಾಢಮಾಸದ ಶುಕ್ರವಾರದಂದು ಚಾಮುಂಡೇಶ್ವರಿ ಬಿಳಿ, ನೇರಳೆ ಬಣ್ಣದ ಸೀರೆಯುಟ್ಟು ವಿಶೇಷ ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

12 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

12 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

14 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

14 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

15 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

15 hours ago