ಮೈಸೂರು

ಚಾಮುಂಡಿಬೆಟ್ಟಕ್ಕೆ ವಿಐಪಿಗಳ ಸಂಖ್ಯೆ ಹೆಚ್ಚಳ : ಧರ್ಮದರ್ಶನಕ್ಕೆ ತೊಡಕು

ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ ವಿಐಪಿಗಳ ಸರತಿ ಸಾಲು ಮಾರುದ್ದ ಇತ್ತು.

ದೇವಾಲಯದ ಗರ್ಭಗುಡಿಗೆ ತೆರಳಲೂ ಸರತಿ ಸಾಲಿನಲ್ಲಿ ನಿಂತಿದ್ದರು. ಇದರಿಂದ ಧರ್ಮ ದರ್ಶನಕ್ಕೆ ಮಂಜಾನೆಯಿಂದಲೇ ಸರತಿ ಸಾಲಿನಲ್ಲಿ ಬಂದಿದ್ದವರಿಗೆ ಸಮಸ್ಯೆಯಾಯಿತು. ಭಕ್ತರೊಂದಿಗೆ ವಿಐಪಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಜಿಲ್ಲಾಡಳಿತ ಈ ಬಾರಿ ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲವೆಂದು ಹೇಳಿತ್ತು.

ಆದರೆ, ಹೇಳಿದ್ದೇ ಒಂದು ಮಾಡಿದ್ದೇ ಒಂದು ಎಂಬಂತಿತ್ತು ಬೆಟ್ಟದಲ್ಲಿನ ಪರಿಸ್ಥಿತಿ. ಧರ್ಮದರ್ಶನದಲ್ಲಿ ದರ್ಶನಕ್ಕೆ ನಿಂತಿದ್ದ ಮಹಿಳೆಯರು ವಿವಿಐಪಿಗಳನ್ನು ಒಳಗೆ ಕಳುಹಿಸುತ್ತಿದ್ದಕ್ಕೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಪೊಲೀಸ್‌ ಸಿಬ್ಬಂದಿ ವಿರುದ್ಧ ಕಿಡಿಕಾರಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚಿತ್ರ ನಟ ಶಶಿಕುಮಾರ್‌, ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಗ್ಯಾರಂಟಿ ಯೋಜನೆ ಉಪಧ್ಯಾಕ್ಷ ಹೆಚ್.ಎಂ ರೇವಣ್ಣ, ಸಂಸದ ರಾಘವೇಂದ್ರ, ಬಿಜೆಪಿ ಶಾಸಕ ಶ್ರೀವತ್ಸ, ಜೆಡಿಎಸ್‌ ಶಾಸಕ ಎ.ಮಂಜು ಸೇರಿದಂತೆ ಅನೇಕ ವಿಐಪಿಗಳು ಕುಟುಂಬ ಸಮೇತ ದರ್ಶನ ಪಡೆದರು.

ಮೂರನೇ ಆಷಾಢಮಾಸದ ಶುಕ್ರವಾರದಂದು ಚಾಮುಂಡೇಶ್ವರಿ ಬಿಳಿ, ನೇರಳೆ ಬಣ್ಣದ ಸೀರೆಯುಟ್ಟು ವಿಶೇಷ ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago