ಮೈಸೂರು

ಹೆಚ್ಚಿದ ಮಾನವ-ಹುಲಿ ಸಂಘರ್ಷ : ಅರಣ್ಯಾಧಿಕಾರಿಗಳಿಗೆ ಸಿಎಂ ಕೊಟ್ಟ ಸಲಹೆ ಏನು..?

ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ‌ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಪರಿಹಾರ ಕ್ರಮಗಳನ್ನು ಸಹ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಮೈಸೂರು ಭಾಗದಲ್ಲಿ ಮಾನವ- ಹುಲಿ,ಆನೆ ಸಂಘರ್ಷಗ ಬಗ್ಗೆ ಗಂಭೀರ ಚರ್ಚೆ ನಡೆಸಿದರು.

ಅರಣ್ಯಾಧಿಕಾರಿಗಳಿಗೆ ಸಿಎಂ ಕೊಟ್ಟ ಸಲಹೆ ಹೀಗಿದೆ….

1. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು
2. ಲಾಂಟೆನಾ ತೆಗೆಸಬೇಕು
3. ಅರಣ್ಯದಲ್ಲಿ ಮೇವು ಬೆಳೆಸಬೇಕು
4. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು

ಇದನ್ನು ಓದಿ: ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಜೊತೆಗೆ ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ‌ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸಿಎಂ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿಗಳು, ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ : ಸಿ.ಎಂ ಸೂಚನೆ
ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎಂದು ಸೂಚನೆ ನೀಡಿದರು.

ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲ: ಅನಿಲ್ ಚಿಕ್ಕಮಾದು
ಸಿಎಂ ಮಾನವ-ಹುಲಿ ಸಂಘರ್ಷದ ಬಗ್ಗೆ ಚರ್ಚೆ ನಡೆಸುವಾಗ, ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ ಎಂದು ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮುಖ್ಯಮಂತ್ರಿಗಳ‌ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾವ ಜೀವ ಹಾನಿ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

12 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

12 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

13 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

13 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

13 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

14 hours ago