ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಪರಿಹಾರ ಕ್ರಮಗಳನ್ನು ಸಹ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಪಂಚಾಯತ್ನ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಮೈಸೂರು ಭಾಗದಲ್ಲಿ ಮಾನವ- ಹುಲಿ,ಆನೆ ಸಂಘರ್ಷಗ ಬಗ್ಗೆ ಗಂಭೀರ ಚರ್ಚೆ ನಡೆಸಿದರು.
ಅರಣ್ಯಾಧಿಕಾರಿಗಳಿಗೆ ಸಿಎಂ ಕೊಟ್ಟ ಸಲಹೆ ಹೀಗಿದೆ….
1. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು
2. ಲಾಂಟೆನಾ ತೆಗೆಸಬೇಕು
3. ಅರಣ್ಯದಲ್ಲಿ ಮೇವು ಬೆಳೆಸಬೇಕು
4. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು
ಇದನ್ನು ಓದಿ: ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್ಎಫ್ಓ ಮೇಲೆ ಹಲ್ಲೆ
ಜೊತೆಗೆ ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸಿಎಂ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿಗಳು, ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ : ಸಿ.ಎಂ ಸೂಚನೆ
ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎಂದು ಸೂಚನೆ ನೀಡಿದರು.
ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲ: ಅನಿಲ್ ಚಿಕ್ಕಮಾದು
ಸಿಎಂ ಮಾನವ-ಹುಲಿ ಸಂಘರ್ಷದ ಬಗ್ಗೆ ಚರ್ಚೆ ನಡೆಸುವಾಗ, ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ ಎಂದು ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾವ ಜೀವ ಹಾನಿ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…