ಮೈಸೂರು

ಹೆಚ್ಚುತ್ತಿರುವ ಹೃದಯಾಘಾತ : ಜನಸಾಮಾನ್ಯರಲ್ಲಿ ಇಮ್ಮಡಿಯಾದ ಆತಂಕ

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕ ಇಮ್ಮಡಿಗೊಂಡು ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.

ಹಾಸನದಲ್ಲಿ 42 ದಿನಗಳ ಅವಧಿಯಲ್ಲಿ 23ಕ್ಕೂ ಹೆಚ್ಚು ಮಂದಿ ಕಿರಿಯ ವಯಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಅದರ ಬೆನ್ನಲ್ಲೇ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ.

ಹಾವೇರಿ ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ 48 ವರ್ಷದ ಸರ್ಕಾರಿ ವೈದ್ಯ ಡಾ. ಸಂದೀಪ್, ತುಮಕೂರಿನಲ್ಲಿ ಬಿಜೆಪಿ ಯುವಮೋರ್ಚಾದ ಮುಖಂಡ 36 ವರ್ಷದ ನೀಲಕಂಠಸ್ವಾಮಿ, ದಾವಣಗೆರೆಯಲ್ಲಿ 19 ವರ್ಷದ ಯುವತಿ ತರಕಾರಿ ಕತ್ತರಿಸುವಾಗಲೇ ಪಕ್ಕಕ್ಕೆ ವಾಲಿಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಅಲ್ಪಾವಧಿಯಲ್ಲಿ ಆರು ಮಂದಿ ಹೃದಯಾಘಾತಕ್ಕೆ ಒಳಗಾಗಿರುವ ವರದಿ ಇದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ-ಜೂನ್ ತಿಂಗಳಿನಲ್ಲಿ 14 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಈ ಎಲ್ಲಾ ಪ್ರಕರಣಗಳಲ್ಲೂ ಅಸ್ವಸ್ಥರಾದ ಕೆಲವೇ ನಿಮಿಷಗಳಲ್ಲಿ ಪ್ರಾಣವಾಯು ಹಾರಿಹೋಗಿರುವುದು, ಪ್ರಾಥಮಿಕ ಚಿಕಿತ್ಸೆಗೂ ಅವಕಾಶವಿಲ್ಲದಂತೆ ಸಾವಿನ ಸರಣಿಗಳಾಗುತ್ತಿರುವುದು ಆತಂಕ ಮೂಡಿಸಿದೆ.

ಆಸ್ಪತ್ರೆಗಳ ಮೇಲೆ ಹೆಚ್ಚಿದ ಒತ್ತಡ : ಅದರಲ್ಲೂ ಬಹುತೇಕ ಮಂದಿ ಚಿಕ್ಕ ವಯಸ್ಸಿನವರೇ ಸಾವನ್ನಪ್ಪುತ್ತಿದ್ದಾರೆ. ಯುವಕರು-ಯುವತಿಯರು ಎಂಬ ಬೇಧವಿಲ್ಲದೆ ಸರಣಿ ಸಾವುಗಳಾಗುತ್ತಿವೆ. ಇದರಿಂದಾಗಿ ಜನರಲ್ಲಿ ಆತಂಕ ಮನೆಮಾಡಿದೆ.

ಜನತೆ ಸಣ್ಣಪುಟ್ಟ ಅಸ್ವಸ್ಥತೆಗಳಿಗೂ ತಪಾಸಣೆಗಾಗಿ ಹೃದ್ರೋಗ ತಜ್ಞರ ಬಳಿ ದಾಂಗುಡಿ ಇಡುತ್ತಿದ್ದಾರೆ. ಇದರಿಂದಾಗಿ ಬೆಂಗಳೂರು, ಮೈಸೂರು, ಕಲಬುರಗಿಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಜೊತೆಗೆ ಖಾಸಗಿ ಹೃದ್ರೋಗ ತಜ್ಞರ ಬಳಿಯೂ ತಪಾಸಣೆಗೊಳಗಾಗುತ್ತಿರುವ ಸಂಖ್ಯೆ ತೀವ್ರಗೊಂಡಿದೆ. ಸಾಮರ್ಥ್ಯ ಮೀರಿ ರೋಗಿಗಳು ಬರುತ್ತಿರುವುದರಿಂದ ತಪಾಸಣೆಗೆ ಒತ್ತಡ ಹೆಚ್ಚಾಗಿದೆ. ಸಾರ್ವಜನಿಕರು ಮೊದಲು ಸಾಮಾನ್ಯ ಪರೀಕ್ಷೆಗೆ ಒಳಗಾಗಿ ನಂತರ ಹೆಚ್ಚಿನ ಚಿಕಿತ್ಸೆಗೆ ತಜ್ಞರ ಬಳಿ ಹೋಗುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ.

ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ದಿನಕ್ಕೆ 700 ರಿಂದ 1000 ಇಸಿಜಿಗಳಾಗುತ್ತಿದ್ದವು. ಇತ್ತೀಚೆಗೆ ಒಂದು ಸಾವಿರಕ್ಕೂ ಹೆಚ್ಚಿನ ಇಸಿಜಿ ಮಾಡಲಾಗುತ್ತಿದೆ. ಸುಮಾರು 2 ರಿಂದ 3 ಸಾವಿರ ಜನ ಕಾಲಾವಕಾಶ ಸಾಲದೇ ತೆರಳುತ್ತಿದ್ದಾರೆ ಎಂಬ ವರದಿಗಳಿವೆ.

ಸೌಲಭ್ಯಗಳ ಕೊರತೆ : ಹೃದಯಾಘಾತ ಎಂಬುದು ಸಮಯವಕಾಶವನ್ನೇ ನೀಡದೇ ಜೀವಹತ್ಯೆ ಮಾಡುತ್ತಿದ್ದು, ಬಹಳಷ್ಟು ಪ್ರಕರಣಗಳಲ್ಲಿ ತತ್‍ಕ್ಷಣಕ್ಕೆ ಸೂಕ್ತ ಚಿಕಿತ್ಸೆ ಪಡೆಯದೆ ಸಾವುಗಳಾಗಿವೆ. ಆಂಬುಲೆನ್ಸ್ ಸೇವೆ ಹಾಗೂ ಪ್ರಾಥಮಿಕ ಚಿಕಿತ್ಸೆಯ ಕೊರತೆ ಬಹಳಷ್ಟು ಪ್ರಕರಣಗಳಲ್ಲಿ ಕಂಡುಬಂದಿದೆ.‌

ರಾಜ್ಯಸರ್ಕಾರ ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಹೃದಯಜ್ಯೋತಿ ಯೋಜನೆಯನ್ನು ಆರಂಭಿಸಿದೆ. ಇದು ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸಲು ಅನುಕೂಲವಾಗುವಂತಹ ಸಲಕರಣೆಗಳನ್ನು ಒದಗಿಸುವ ಮೂಲ ಉದ್ದೇಶ ಹೊಂದಿದೆ. ಆದರೆ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದಿರುವ ಬಗ್ಗೆ ಅನುಮಾನಗಳಿವೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

55 mins ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

1 hour ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

2 hours ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

3 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

3 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

3 hours ago