ಮೈಸೂರು

ಹೆಚ್ಚುತ್ತಿರುವ ಹೃದಯಾಘಾತ : ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಯುವ ಸಮೂಹ

ಮೈಸೂರು : ನೆರೆ ಜಿಲ್ಲೆ ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಸಾರ್ವಜನಿಕರು ದಾಂಗುಡಿ ಇಡುತ್ತಿದ್ದಾರೆ.

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಸಾರ್ವಜನಿಕರು ಮುಂಜಾನೆಯೆಯಿಂದಲೇ ಆಸ್ಪತ್ರೆಯ ಓಪಿಡಿಗೆ ಬಂದಿದ್ದಾರೆ. ಜನ ನಿಯಂತ್ರಣ ಮಾಡಲಾಗದೆ ಆಸ್ಪತ್ರೆ ಸಿಬ್ಬಂದಿ ಬ್ಯಾರಿಕೇಡ್ ಸಿಸ್ಟಮ್‌ ಮಾಡಿದ್ದಾರೆ. ಸರತಿ ಸಾಲಲ್ಲಿ ನಿಂತಿರುವ ಸಾರ್ವಜನಿಕರಲ್ಲಿ ಯುವಕ ಯುವತಿಯರ ಸಂಖ್ಯೆಯೇ ಗಣನೀಯವಾಗಿದೆ.

ಈ ಹಿಂದೆ ನಿತ್ಯ 500ರಷ್ಟು ಬರುತ್ತಿದ್ದ ಸಾರ್ವಜನಿಕರ ಸಂಖ್ಯೆ ದಿಢೀರ್ 1,500ಕ್ಕೂ ಅಧಿಕ ಸಂಖ್ಯೆಗೆ ಏರಿಕೆಯಾಗಿದ್ದು, ಬಂದಿರುವವರಲ್ಲಿ ಮೊದಲ ಬಾರಿ ಬಂದಿರುವವರ ಸಂಖ್ಯೆಯೇ ಅಧಿಕವಾಗಿದೆ ಎನ್ನುತ್ತದೆ ಆಸ್ಪತ್ರೆ ಆಡಳಿತ ಮಂಡಳಿ.

ಜನ ಪ್ಯಾನಿಕ್ ಆಗಿ ಸಣ್ಣ ನೋವು ಬಂದ್ರೂ ಆಸ್ಪತ್ರೆಗೆ ಬರ್ತಿದ್ದಾರೆ. ಆದ್ರೆ ಹೃದಯ ಸಮಸ್ಯೆಯಿಂದ ಬರುತ್ತಿರುವವರು ಕಡಿಮೆ, ಮಾನಸಿಕ ಒತ್ತಡ, ಸಾಲದ ಸಮಸ್ಯೆ, ನಿರುದ್ಯೋಗ, ಜಂಕ್ ಫುಡ್ ಸೇರಿ ಹಲವು ಸಮಸ್ಯೆಗಳಿಂದ ಹೃದಯಾಘಾತ ಸಂಭವಿಸುತ್ತದೆ. ಜನ ಪ್ಯಾನಿಕ್ ಆಗಬೇಡಿ, ಸುಸ್ತು, ಬೆವರುವಿಕೆ,ಎದೆನೋವು ಇದ್ದಾಗ ಮಾತ್ರ ಆಸ್ಪತ್ರೆಗೆ ಬನ್ನಿ, ಅತಿ ಹೆಚ್ಚು ರೋಗಿಗಳಿಂದಲೂ ಆಸ್ಪತ್ರೆ ಮೇಲೆ ಒತ್ತಡ ಇದೆ. ಜನ ಗಾಬರಿಯಾಗೊದು ಬೇಡ ಎಂದು ಜಯದೇವ ಆಸ್ಪತ್ರೆಯ ಹೃದಯ ತಜ್ಞ ಡಾ.ದಿನೇಶ್ ಸಲಹೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

26 mins ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

52 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

1 hour ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

2 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

11 hours ago