ಮೈಸೂರು

ಹೆಚ್ಚುತ್ತಿರುವ ಹೃದಯಾಘಾತ : ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಯುವ ಸಮೂಹ

ಮೈಸೂರು : ನೆರೆ ಜಿಲ್ಲೆ ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಸಾರ್ವಜನಿಕರು ದಾಂಗುಡಿ ಇಡುತ್ತಿದ್ದಾರೆ.

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಸಾರ್ವಜನಿಕರು ಮುಂಜಾನೆಯೆಯಿಂದಲೇ ಆಸ್ಪತ್ರೆಯ ಓಪಿಡಿಗೆ ಬಂದಿದ್ದಾರೆ. ಜನ ನಿಯಂತ್ರಣ ಮಾಡಲಾಗದೆ ಆಸ್ಪತ್ರೆ ಸಿಬ್ಬಂದಿ ಬ್ಯಾರಿಕೇಡ್ ಸಿಸ್ಟಮ್‌ ಮಾಡಿದ್ದಾರೆ. ಸರತಿ ಸಾಲಲ್ಲಿ ನಿಂತಿರುವ ಸಾರ್ವಜನಿಕರಲ್ಲಿ ಯುವಕ ಯುವತಿಯರ ಸಂಖ್ಯೆಯೇ ಗಣನೀಯವಾಗಿದೆ.

ಈ ಹಿಂದೆ ನಿತ್ಯ 500ರಷ್ಟು ಬರುತ್ತಿದ್ದ ಸಾರ್ವಜನಿಕರ ಸಂಖ್ಯೆ ದಿಢೀರ್ 1,500ಕ್ಕೂ ಅಧಿಕ ಸಂಖ್ಯೆಗೆ ಏರಿಕೆಯಾಗಿದ್ದು, ಬಂದಿರುವವರಲ್ಲಿ ಮೊದಲ ಬಾರಿ ಬಂದಿರುವವರ ಸಂಖ್ಯೆಯೇ ಅಧಿಕವಾಗಿದೆ ಎನ್ನುತ್ತದೆ ಆಸ್ಪತ್ರೆ ಆಡಳಿತ ಮಂಡಳಿ.

ಜನ ಪ್ಯಾನಿಕ್ ಆಗಿ ಸಣ್ಣ ನೋವು ಬಂದ್ರೂ ಆಸ್ಪತ್ರೆಗೆ ಬರ್ತಿದ್ದಾರೆ. ಆದ್ರೆ ಹೃದಯ ಸಮಸ್ಯೆಯಿಂದ ಬರುತ್ತಿರುವವರು ಕಡಿಮೆ, ಮಾನಸಿಕ ಒತ್ತಡ, ಸಾಲದ ಸಮಸ್ಯೆ, ನಿರುದ್ಯೋಗ, ಜಂಕ್ ಫುಡ್ ಸೇರಿ ಹಲವು ಸಮಸ್ಯೆಗಳಿಂದ ಹೃದಯಾಘಾತ ಸಂಭವಿಸುತ್ತದೆ. ಜನ ಪ್ಯಾನಿಕ್ ಆಗಬೇಡಿ, ಸುಸ್ತು, ಬೆವರುವಿಕೆ,ಎದೆನೋವು ಇದ್ದಾಗ ಮಾತ್ರ ಆಸ್ಪತ್ರೆಗೆ ಬನ್ನಿ, ಅತಿ ಹೆಚ್ಚು ರೋಗಿಗಳಿಂದಲೂ ಆಸ್ಪತ್ರೆ ಮೇಲೆ ಒತ್ತಡ ಇದೆ. ಜನ ಗಾಬರಿಯಾಗೊದು ಬೇಡ ಎಂದು ಜಯದೇವ ಆಸ್ಪತ್ರೆಯ ಹೃದಯ ತಜ್ಞ ಡಾ.ದಿನೇಶ್ ಸಲಹೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

5 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

12 hours ago