ಮೈಸೂರು

ಹೆಚ್ಚುತ್ತಿರುವ ವೇಶ್ಯವಾಟಿಕೆ : ದಂಧೆ ನಿಗ್ರಹಿಸಲು ತಂಡ ರಚಿಸುವಂತೆ ಒಡನಾಡಿ ಮನವಿ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರದಲ್ಲಿ ಪ್ರತಿ ಕಿಲೋಮಿಟರ್ ಪ್ರದೇಶಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ. ದಂಧೆಕೋರರು ಯೂನಿಸೆಕ್ಸ್ ಸಲೂನ್ ಮತ್ತು ಸ್ಪಾ, ಬ್ಯೂಟಿ ಪಾರ್ಲರ್, ಮಸಾಜ್ ಕೇಂದ್ರ ಮತ್ತು ಎಸ್ಕಾರ್ಟ್ ಸರ್ವಿಸ್ ಮೊದಲಾದವುಗಳ ಹೆಸರನ್ನು ದುರುಪಯೋಗ ಪಡಿಸಿಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಕಾ ಹೇಳಿಕೆ ನೀಡಿರುವ ಅವರು, ಅನೇಕ ಕಾಲೇಜುಗಳು, ವಸತಿ ನಿಲಯಗಳು ಹಾಗೂ ಕೌಶಲ್ಯ ತರಬೇತಿ ಮತ್ತು ಅಭಿವೃದ್ಧಿ ಕೇಂದ್ರಗಳ ಆಸುಪಾಸಿನಲ್ಲಿ ಈ ಕರಾಳ ದಂಧೆಯು ನಡೆಯುತ್ತಿದೆ. ಅನೇಕ ಯುವತಿಯರು ಹಾಗೂ ಅಪ್ರಾಪ್ತರು ಈ ದಂಧೆಗೆ ಸಿಲುಕಿ ನರಳುವಂತಾಗಿದೆ. ಹಲವು ಕಾಲೇಜು ಹೆಣ್ಣು ಮಕ್ಕಳ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸೆರೆಹಿಡಿದು ಅವರನ್ನು ಬ್ಲಾಕ್‌ಮೇಲ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ. ಬೆಟ್ಟದಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆಗಳು

ರಾಜ್ಯದ ಬಹುತೇಕ ನಗರಗಳು ಹಾಗೂ ಪಟ್ಟಣಗಳಷ್ಟೇ ಅಲ್ಲದೆ ಅವುಗಳಿಗೆ ಹೊಂದಿಕೊಂಡಿರುವ ಗ್ರಾಮೀಣ ಪ್ರದೇಶಗಳಲ್ಲಿಯೂ ವೇಶ್ಯಾವಾಟಿಕೆ ದಂಧೆ ನಾನಾ ಸ್ವರೂಪಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ. ಸಮೀಕ್ಷೆಯೊಂದರ ಪ್ರಕಾರ ರಾಜ್ಯದಲ್ಲಿ ಲೈಂಗಿಕ ದಂಧೆಯಲ್ಲಿ ತೊಡಗಿಸಲ್ಪಟ್ಟ ಯುವತಿಯರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ಇದರಿಂದ ರಾಜ್ಯವು ಅತ್ಯಂತ ಹೆಚ್ಚಿನ ಲೈಂಗಿಕ ಕಾರ್ಯಕರ್ತೆಯರನ್ನು ಹೊಂದಿರುವ ರಾಜ್ಯವೆಂಬ ಕುಖ್ಯಾತಿಗೆ ಪಾತ್ರವಾಗಿದೆ. ಇದು ರಾಜ್ಯದ ಆಡಳಿತ, ಸಾಮಾಜಿಕ ಹಾಗೂ ಆರ್ಥಿಕ ದುಸ್ಥಿತಿಯನ್ನು ತೋರುತ್ತದೆ ಎಂದಿದ್ದಾರೆ.

ಒಡನಾಡಿ ಸಂಸ್ಥೆಯ ಮತ್ತೋರ್ವ ನಿರ್ದೇಶಕ ಪರಶುರಾಮ್ ಅವರು, ವ್ಯೇಶ್ಯಾವಾಟಿಕೆಯಂತಹ ಕರಾಳ ಕಬಂಧ ಬಾಹುಗಳಿಗೆ ಸಿಲುಕಿದ ಹೆಣ್ಣು ಮಕ್ಕಳಷ್ಟೇ ಅಲ್ಲದೆ ಅವರ ಕುಟುಂಬದವರ ಭವಿಷ್ಯವೂ ಡೋಲಾಯಮಾನ ಸ್ಥಿತಿಗೆ ತಲುಪಿದೆ. ಆದ್ದರಿಂದ ವ್ಯೇಶ್ಯಾವಾಟಿಕೆ ದಂಧೆಯನ್ನು ನಿಗ್ರಹಿಸಲು ತಂಡಗಳನ್ನು ರಚಿಸುವಂತೆ ಮೈಸೂರು ಕಾನೂನು ಹಾಗೂ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ನಾಗರಿಕರು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆಯ ಸಂಯೋಜಿತ ಕಾರ್ಯ ನಿರ್ವಹಣೆಯಿಂದ ವ್ಯೇಶ್ಯಾವಾಟಿಕೆ ದಂಧೆಯನ್ನು ನಿಗ್ರಹಿಸಬಹುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

5 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

6 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

7 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

9 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

10 hours ago