ಮೈಸೂರು

ಹೆಚ್ಚುತ್ತಿರುವ ವೇಶ್ಯವಾಟಿಕೆ : ದಂಧೆ ನಿಗ್ರಹಿಸಲು ತಂಡ ರಚಿಸುವಂತೆ ಒಡನಾಡಿ ಮನವಿ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರದಲ್ಲಿ ಪ್ರತಿ ಕಿಲೋಮಿಟರ್ ಪ್ರದೇಶಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ. ದಂಧೆಕೋರರು ಯೂನಿಸೆಕ್ಸ್ ಸಲೂನ್ ಮತ್ತು ಸ್ಪಾ, ಬ್ಯೂಟಿ ಪಾರ್ಲರ್, ಮಸಾಜ್ ಕೇಂದ್ರ ಮತ್ತು ಎಸ್ಕಾರ್ಟ್ ಸರ್ವಿಸ್ ಮೊದಲಾದವುಗಳ ಹೆಸರನ್ನು ದುರುಪಯೋಗ ಪಡಿಸಿಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಕಾ ಹೇಳಿಕೆ ನೀಡಿರುವ ಅವರು, ಅನೇಕ ಕಾಲೇಜುಗಳು, ವಸತಿ ನಿಲಯಗಳು ಹಾಗೂ ಕೌಶಲ್ಯ ತರಬೇತಿ ಮತ್ತು ಅಭಿವೃದ್ಧಿ ಕೇಂದ್ರಗಳ ಆಸುಪಾಸಿನಲ್ಲಿ ಈ ಕರಾಳ ದಂಧೆಯು ನಡೆಯುತ್ತಿದೆ. ಅನೇಕ ಯುವತಿಯರು ಹಾಗೂ ಅಪ್ರಾಪ್ತರು ಈ ದಂಧೆಗೆ ಸಿಲುಕಿ ನರಳುವಂತಾಗಿದೆ. ಹಲವು ಕಾಲೇಜು ಹೆಣ್ಣು ಮಕ್ಕಳ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸೆರೆಹಿಡಿದು ಅವರನ್ನು ಬ್ಲಾಕ್‌ಮೇಲ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ. ಬೆಟ್ಟದಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆಗಳು

ರಾಜ್ಯದ ಬಹುತೇಕ ನಗರಗಳು ಹಾಗೂ ಪಟ್ಟಣಗಳಷ್ಟೇ ಅಲ್ಲದೆ ಅವುಗಳಿಗೆ ಹೊಂದಿಕೊಂಡಿರುವ ಗ್ರಾಮೀಣ ಪ್ರದೇಶಗಳಲ್ಲಿಯೂ ವೇಶ್ಯಾವಾಟಿಕೆ ದಂಧೆ ನಾನಾ ಸ್ವರೂಪಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ. ಸಮೀಕ್ಷೆಯೊಂದರ ಪ್ರಕಾರ ರಾಜ್ಯದಲ್ಲಿ ಲೈಂಗಿಕ ದಂಧೆಯಲ್ಲಿ ತೊಡಗಿಸಲ್ಪಟ್ಟ ಯುವತಿಯರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ಇದರಿಂದ ರಾಜ್ಯವು ಅತ್ಯಂತ ಹೆಚ್ಚಿನ ಲೈಂಗಿಕ ಕಾರ್ಯಕರ್ತೆಯರನ್ನು ಹೊಂದಿರುವ ರಾಜ್ಯವೆಂಬ ಕುಖ್ಯಾತಿಗೆ ಪಾತ್ರವಾಗಿದೆ. ಇದು ರಾಜ್ಯದ ಆಡಳಿತ, ಸಾಮಾಜಿಕ ಹಾಗೂ ಆರ್ಥಿಕ ದುಸ್ಥಿತಿಯನ್ನು ತೋರುತ್ತದೆ ಎಂದಿದ್ದಾರೆ.

ಒಡನಾಡಿ ಸಂಸ್ಥೆಯ ಮತ್ತೋರ್ವ ನಿರ್ದೇಶಕ ಪರಶುರಾಮ್ ಅವರು, ವ್ಯೇಶ್ಯಾವಾಟಿಕೆಯಂತಹ ಕರಾಳ ಕಬಂಧ ಬಾಹುಗಳಿಗೆ ಸಿಲುಕಿದ ಹೆಣ್ಣು ಮಕ್ಕಳಷ್ಟೇ ಅಲ್ಲದೆ ಅವರ ಕುಟುಂಬದವರ ಭವಿಷ್ಯವೂ ಡೋಲಾಯಮಾನ ಸ್ಥಿತಿಗೆ ತಲುಪಿದೆ. ಆದ್ದರಿಂದ ವ್ಯೇಶ್ಯಾವಾಟಿಕೆ ದಂಧೆಯನ್ನು ನಿಗ್ರಹಿಸಲು ತಂಡಗಳನ್ನು ರಚಿಸುವಂತೆ ಮೈಸೂರು ಕಾನೂನು ಹಾಗೂ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ನಾಗರಿಕರು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆಯ ಸಂಯೋಜಿತ ಕಾರ್ಯ ನಿರ್ವಹಣೆಯಿಂದ ವ್ಯೇಶ್ಯಾವಾಟಿಕೆ ದಂಧೆಯನ್ನು ನಿಗ್ರಹಿಸಬಹುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

2 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

2 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

2 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago