increasing tiger attack in mysore
ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ ನೀಡುತ್ತಿದ್ದು, ರೈತರು ಸಾಕಿರುವ ಹಸುಗಳು, ಕುರಿ, ಮೇಕೆಗಳನ್ನು ತಿಂದು ತೇಗುತ್ತಿದೆ.
ಕೆ.ಜೆ.ಹಬ್ಬನಕುಪ್ಪೆಯಲ್ಲಿ ಹುಲಿ ದಾಳಿಗೆ ಹಸು ಸಾವನ್ನಪ್ಪಿದ್ದು, ಪಕ್ಕದಲ್ಲೇ ಇರುವ ಗೌರಿಪುರ ಎಂಬ ಗ್ರಾಮದಲ್ಲಿ ಮತ್ತೊಂದು ಹಸುವಿಗೆ ಗಂಭೀರ ಗಾಯಗಳಾಗಿದೆ.
ನಾಗರಹೊಳೆ ಉದ್ಯಾನದ ಬಳಿಯ ನಂಜಾಪುರ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಕುರುಚಲು ಅರಣ್ಯ ಪ್ರದೇಶದಲ್ಲೂ ಹುಲಿ ಹಸುವಿನ ಮೇಲೆ ದಾಳಿ ಮಾಡಿದ್ದು, ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಆದರೆ ಈ ಭಾಗದಲ್ಲಿ ಹುಲಿ ದಾಳಿಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೀಡಾಗಿದ್ದು, ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆಹಿಡಿಯಲು ಬೋನು ಅಳವಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…