increasing tiger attack in mysore
ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ ನೀಡುತ್ತಿದ್ದು, ರೈತರು ಸಾಕಿರುವ ಹಸುಗಳು, ಕುರಿ, ಮೇಕೆಗಳನ್ನು ತಿಂದು ತೇಗುತ್ತಿದೆ.
ಕೆ.ಜೆ.ಹಬ್ಬನಕುಪ್ಪೆಯಲ್ಲಿ ಹುಲಿ ದಾಳಿಗೆ ಹಸು ಸಾವನ್ನಪ್ಪಿದ್ದು, ಪಕ್ಕದಲ್ಲೇ ಇರುವ ಗೌರಿಪುರ ಎಂಬ ಗ್ರಾಮದಲ್ಲಿ ಮತ್ತೊಂದು ಹಸುವಿಗೆ ಗಂಭೀರ ಗಾಯಗಳಾಗಿದೆ.
ನಾಗರಹೊಳೆ ಉದ್ಯಾನದ ಬಳಿಯ ನಂಜಾಪುರ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಕುರುಚಲು ಅರಣ್ಯ ಪ್ರದೇಶದಲ್ಲೂ ಹುಲಿ ಹಸುವಿನ ಮೇಲೆ ದಾಳಿ ಮಾಡಿದ್ದು, ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಆದರೆ ಈ ಭಾಗದಲ್ಲಿ ಹುಲಿ ದಾಳಿಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೀಡಾಗಿದ್ದು, ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆಹಿಡಿಯಲು ಬೋನು ಅಳವಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಇದು ಶತೋತ್ತರ ದಶಮಾನೋತ್ಸವ ದಾಟಿ ಮುಂದೆ ಸಾಗಿರುವ ಶಾಲೆ. ಕಾಲ ಕಾಲಕ್ಕೆ ಅಭಿವೃದ್ಧಿಗೊಂಡು, ಪ್ರಸ್ತುತ…