increasing tiger attack in mysore
ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ ನೀಡುತ್ತಿದ್ದು, ರೈತರು ಸಾಕಿರುವ ಹಸುಗಳು, ಕುರಿ, ಮೇಕೆಗಳನ್ನು ತಿಂದು ತೇಗುತ್ತಿದೆ.
ಕೆ.ಜೆ.ಹಬ್ಬನಕುಪ್ಪೆಯಲ್ಲಿ ಹುಲಿ ದಾಳಿಗೆ ಹಸು ಸಾವನ್ನಪ್ಪಿದ್ದು, ಪಕ್ಕದಲ್ಲೇ ಇರುವ ಗೌರಿಪುರ ಎಂಬ ಗ್ರಾಮದಲ್ಲಿ ಮತ್ತೊಂದು ಹಸುವಿಗೆ ಗಂಭೀರ ಗಾಯಗಳಾಗಿದೆ.
ನಾಗರಹೊಳೆ ಉದ್ಯಾನದ ಬಳಿಯ ನಂಜಾಪುರ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಕುರುಚಲು ಅರಣ್ಯ ಪ್ರದೇಶದಲ್ಲೂ ಹುಲಿ ಹಸುವಿನ ಮೇಲೆ ದಾಳಿ ಮಾಡಿದ್ದು, ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಆದರೆ ಈ ಭಾಗದಲ್ಲಿ ಹುಲಿ ದಾಳಿಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೀಡಾಗಿದ್ದು, ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆಹಿಡಿಯಲು ಬೋನು ಅಳವಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…