ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ: ಭಯಭೀತರಾದ ಅನ್ನದಾತರು

ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ ನೀಡುತ್ತಿದ್ದು, ರೈತರು ಸಾಕಿರುವ ಹಸುಗಳು, ಕುರಿ, ಮೇಕೆಗಳನ್ನು ತಿಂದು ತೇಗುತ್ತಿದೆ.

ಕೆ.ಜೆ.ಹಬ್ಬನಕುಪ್ಪೆಯಲ್ಲಿ ಹುಲಿ ದಾಳಿಗೆ ಹಸು ಸಾವನ್ನಪ್ಪಿದ್ದು, ಪಕ್ಕದಲ್ಲೇ ಇರುವ ಗೌರಿಪುರ ಎಂಬ ಗ್ರಾಮದಲ್ಲಿ ಮತ್ತೊಂದು ಹಸುವಿಗೆ ಗಂಭೀರ ಗಾಯಗಳಾಗಿದೆ.

ನಾಗರಹೊಳೆ ಉದ್ಯಾನದ ಬಳಿಯ ನಂಜಾಪುರ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಕುರುಚಲು ಅರಣ್ಯ ಪ್ರದೇಶದಲ್ಲೂ ಹುಲಿ ಹಸುವಿನ ಮೇಲೆ ದಾಳಿ ಮಾಡಿದ್ದು, ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಆದರೆ ಈ ಭಾಗದಲ್ಲಿ ಹುಲಿ ದಾಳಿಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೀಡಾಗಿದ್ದು, ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆಹಿಡಿಯಲು ಬೋನು ಅಳವಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

4 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

4 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

4 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

4 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

4 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

4 hours ago