ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ ಕ್ಯೂಸೆಕ್ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ ಕಪಿಲಾ ನದಿ ತುಂಬಿ ಹರಿಯುತ್ತಿದೆ.
ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿರುವುದಿಂದ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ನಂಜನಗೂಡು ನಗರದ ತಗ್ಗು ಪ್ರದೇಶದ ಬಡವಾಣೆ ಸೇರಿದಂತೆ ತಾಲೂಕಿನ ಹುಲ್ಲಹಳ್ಳಿ, ಬೊಕ್ಕಹಳ್ಳಿ, ಕುಳ್ಳಂಕನಹುಂಡಿ ಸೇರಿದಂತೆ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಶುರುವಾಗಿದೆ.
ಮಳೆಯ ಆರ್ಭಟ ಹೆಚ್ಚಾದಲ್ಲಿ ನೀರಿನ ಹೊರ ಹರಿವೂ ಕೂಡ ಹೆಚ್ಚಳವಾಗಲಿದೆ. ಜಲಾಶಯದಿಂದ ಹೊರ ಬಿಡುವ ನೀರಿನ ಪ್ರಮಾಣ ೫೦ ಸಾವಿರ ಕ್ಯೂಸೆಕ್ ತಲುಪಿದ್ದೆ ಆದಲ್ಲಿ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಲಿದೆ. ಈಗಾಗಲೇ ಸುತ್ತೂರು, ನಗರ್ಲೆ, ಹುಲ್ಲಹಳ್ಳಿ, ಕುಳ್ಳಂಕನಹುಂಡಿ ಗ್ರಾಮಗಳ ನದಿ ತೀರದಲ್ಲಿರುವ ತಗ್ಗು ಪ್ರದೇಶದ ಜನರಿಗೆ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಜನರು ಮತ್ತು ಜಾನುವಾರುಗಳನ್ನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲು ಸೂಚಿಸಲಾಗಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…