ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ ಕ್ಯೂಸೆಕ್ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ ಕಪಿಲಾ ನದಿ ತುಂಬಿ ಹರಿಯುತ್ತಿದೆ.
ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿರುವುದಿಂದ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ನಂಜನಗೂಡು ನಗರದ ತಗ್ಗು ಪ್ರದೇಶದ ಬಡವಾಣೆ ಸೇರಿದಂತೆ ತಾಲೂಕಿನ ಹುಲ್ಲಹಳ್ಳಿ, ಬೊಕ್ಕಹಳ್ಳಿ, ಕುಳ್ಳಂಕನಹುಂಡಿ ಸೇರಿದಂತೆ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಶುರುವಾಗಿದೆ.
ಮಳೆಯ ಆರ್ಭಟ ಹೆಚ್ಚಾದಲ್ಲಿ ನೀರಿನ ಹೊರ ಹರಿವೂ ಕೂಡ ಹೆಚ್ಚಳವಾಗಲಿದೆ. ಜಲಾಶಯದಿಂದ ಹೊರ ಬಿಡುವ ನೀರಿನ ಪ್ರಮಾಣ ೫೦ ಸಾವಿರ ಕ್ಯೂಸೆಕ್ ತಲುಪಿದ್ದೆ ಆದಲ್ಲಿ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಲಿದೆ. ಈಗಾಗಲೇ ಸುತ್ತೂರು, ನಗರ್ಲೆ, ಹುಲ್ಲಹಳ್ಳಿ, ಕುಳ್ಳಂಕನಹುಂಡಿ ಗ್ರಾಮಗಳ ನದಿ ತೀರದಲ್ಲಿರುವ ತಗ್ಗು ಪ್ರದೇಶದ ಜನರಿಗೆ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಜನರು ಮತ್ತು ಜಾನುವಾರುಗಳನ್ನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲು ಸೂಚಿಸಲಾಗಿದೆ.
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…