ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ ಕ್ಯೂಸೆಕ್ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ ಕಪಿಲಾ ನದಿ ತುಂಬಿ ಹರಿಯುತ್ತಿದೆ.
ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿರುವುದಿಂದ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ನಂಜನಗೂಡು ನಗರದ ತಗ್ಗು ಪ್ರದೇಶದ ಬಡವಾಣೆ ಸೇರಿದಂತೆ ತಾಲೂಕಿನ ಹುಲ್ಲಹಳ್ಳಿ, ಬೊಕ್ಕಹಳ್ಳಿ, ಕುಳ್ಳಂಕನಹುಂಡಿ ಸೇರಿದಂತೆ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಶುರುವಾಗಿದೆ.
ಮಳೆಯ ಆರ್ಭಟ ಹೆಚ್ಚಾದಲ್ಲಿ ನೀರಿನ ಹೊರ ಹರಿವೂ ಕೂಡ ಹೆಚ್ಚಳವಾಗಲಿದೆ. ಜಲಾಶಯದಿಂದ ಹೊರ ಬಿಡುವ ನೀರಿನ ಪ್ರಮಾಣ ೫೦ ಸಾವಿರ ಕ್ಯೂಸೆಕ್ ತಲುಪಿದ್ದೆ ಆದಲ್ಲಿ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಲಿದೆ. ಈಗಾಗಲೇ ಸುತ್ತೂರು, ನಗರ್ಲೆ, ಹುಲ್ಲಹಳ್ಳಿ, ಕುಳ್ಳಂಕನಹುಂಡಿ ಗ್ರಾಮಗಳ ನದಿ ತೀರದಲ್ಲಿರುವ ತಗ್ಗು ಪ್ರದೇಶದ ಜನರಿಗೆ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಜನರು ಮತ್ತು ಜಾನುವಾರುಗಳನ್ನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲು ಸೂಚಿಸಲಾಗಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…