ಮೈಸೂರು

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣಗೊಂಡಿರುವ ರೆಸಾರ್ಟ್‌ಗಳು, ಕಟ್ಟಡಗಳನ್ನು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ತೆರವು ಗೊಳಿಸುವಂತೆ ಒತ್ತಾಯಿಸಿ ಸೇವ್ ಕಬಿನಿ ಮತ್ತು ರೈತ ಸಂಘಟನೆಗಳು ನಡೆಸುತ್ತಿದ್ದ ಅನಿರ್ದಿಷ್ಟ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳ ಭರವಸೆಯ ಮೇರೆಗೆ ಅಂತ್ಯಗೊಳಿಸಲಾಗಿದೆ.

ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ರೈತ ಸಂಘಟನೆಗಳು, ರೈತ ಮುಖಂಡರು ವನ್ಯಜೀವಿ ಪರಿಸರ ಪ್ರೇಮಿಗಳು ಸೇವ್ ಕಬಿನಿ ಹೆಸರಿನಲ್ಲಿ ಮಂಗಳವಾರದಿಂದ ಅನಿರ್ದಿಷ್ಟ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಈ ವಿಚಾರ ತಿಳಿದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಕೋಟೆ ತಹಸಿಲ್ದಾರ್ ಶ್ರೀನಿವಾಸ್ ಅವರಿಗೆ ದೂರವಾಣಿ ಕರೆ ಮಾಡಿ, ರೈತರು ಪ್ರತಿಭಟನೆಯನ್ನು ಕೈಬಿಡಬೇಕು. ಒಂದು ತಿಂಗಳ ಒಳಗಾಗಿ ರೆಸಾರ್ಟ್‌ಗಳ ವರದಿಗಳನ್ನು ಪಡೆದು ಅಧಿಕಾರಿಗಳ ಜೊತೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುವಂತೆ ಸೂಚಿಸಿದರು.

ಸಂಜೆ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸಿಲ್ದಾರ್ ಜಿಲ್ಲಾಧಿಕಾರಿಗಳು ನೀಡಿದ್ದ ಭರವಸೆಯನ್ನು ತಿಳಿಸಿದಾಗ ಪ್ರತಿಭಟನಾಕಾರರು ಜಿಲ್ಲಾಧಿಕಾರಿಯವರಿಗೆ ದೂರವಾಣಿಯಲ್ಲಿ ಮಾತನಾಡಿ, ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳದೆ ಇದ್ದರೆ ಮುಂದಿನ ತಿಂಗಳು ಜಿಲ್ಲಾಧಿಕಾರಿ ಕಚೇರಿ ಅಥವಾ ಕೋಟೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟರು.

ಪ್ರತಿಭಟನೆಯಲ್ಲಿ ಸೇವ್ ಕಬಿನಿ ತಂಡದ ವಕೀಲ ರವಿಕುಮಾರ್, ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಮಂಜು ಕಿರಣ್, ರವಿಕುಮಾರ್, ಜಕ್ಕಳ್ಳಿ ಮಹೇಂದ್ರ, ನಾಗರಾಜು, ಪಳಿನಿ ಸ್ವಾಮಿ, ಕಾಶಿಪತಿ, ಜಗದೀಶ್, ಗುರುಪ್ರಸಾದ್, ಶಿವಶಂಕರ್, ಮಧು, ದೊರೆಸ್ವಾಮಿ, ಶಿವಲಿಂಗಪ್ಪ, ಹೊ.ಕೆ.ಮಹೇಂದ್ರ, ಗೋವಿಂದೇಗೌಡ, ಜೆ.ಪಿ.ನಾಗರಾಜ್, ಪರಮೇಶ್, ರವಿಕುಮಾರ್, ಭಾನುಮೋಹನ್, ಕುಮಾರಸ್ವಾಮಿ, ಸತೀಶ, ರಾಜೇಶ, ಸುನಿಲ್, ದಾಸೇಗೌಡ, ಕಬಿನಿ ಶಿವಲಿಂಗ, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ರಾಜೇಶ್, ಇತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago