ಮೈಸೂರು

ಬಿಹಾರದಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

ಇದನ್ನು ಓದಿ: ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ; ಪ್ರತೀ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ : ಸಿ.ಎಂ

ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ
ಆಂಧ್ರಪ್ರದೇಶದಲ್ಲಿ ವಿದೇಶಿ ಕಂಪನಿಗಳು ಹೂಡಿಕೆ ಮಾಡುತ್ತಿರುವ ಬಗ್ಗೆ ಆಂಧ್ರದ ಸಚಿವರೊಬ್ಬರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಹೂಡಿಕೆದಾರರು ತಮಗೆ ಅನುಕೂಲಕರವಾದ ಪ್ರದೇಶಗಳಲ್ಲಿ ಬಂಡವಾಳ ಹೂಡುತ್ತಾರೆ. ಕರ್ನಾಟಕದಲ್ಲಿ ಬಹಳಷ್ಟು ಹೂಡಿಕೆದಾರರು ಬಂಡವಾಳ ಈಗಾಗಲೇ ಹೂಡಿಕೆ ಮಾಡಿದ್ದು, ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗಿರುವ ಬಗ್ಗೆ ದೂರಿದ್ದಾರೆಯೇ? ಐಫೋನ್ ತಯಾರಿಕೆಯ ದೊಡ್ಡ ಹೂಡಿಕೆ ಕರ್ನಾಟಕದಲ್ಲಿಯೇ ಆಗಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

8 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

9 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

12 hours ago