ಮೈಸೂರು

ಬಿಹಾರದಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

ಇದನ್ನು ಓದಿ: ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ; ಪ್ರತೀ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ : ಸಿ.ಎಂ

ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ
ಆಂಧ್ರಪ್ರದೇಶದಲ್ಲಿ ವಿದೇಶಿ ಕಂಪನಿಗಳು ಹೂಡಿಕೆ ಮಾಡುತ್ತಿರುವ ಬಗ್ಗೆ ಆಂಧ್ರದ ಸಚಿವರೊಬ್ಬರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಹೂಡಿಕೆದಾರರು ತಮಗೆ ಅನುಕೂಲಕರವಾದ ಪ್ರದೇಶಗಳಲ್ಲಿ ಬಂಡವಾಳ ಹೂಡುತ್ತಾರೆ. ಕರ್ನಾಟಕದಲ್ಲಿ ಬಹಳಷ್ಟು ಹೂಡಿಕೆದಾರರು ಬಂಡವಾಳ ಈಗಾಗಲೇ ಹೂಡಿಕೆ ಮಾಡಿದ್ದು, ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗಿರುವ ಬಗ್ಗೆ ದೂರಿದ್ದಾರೆಯೇ? ಐಫೋನ್ ತಯಾರಿಕೆಯ ದೊಡ್ಡ ಹೂಡಿಕೆ ಕರ್ನಾಟಕದಲ್ಲಿಯೇ ಆಗಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

3 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

3 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

4 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

6 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

7 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

9 hours ago