ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ; ಪ್ರತೀ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ : ಸಿ.ಎಂ
ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ
ಆಂಧ್ರಪ್ರದೇಶದಲ್ಲಿ ವಿದೇಶಿ ಕಂಪನಿಗಳು ಹೂಡಿಕೆ ಮಾಡುತ್ತಿರುವ ಬಗ್ಗೆ ಆಂಧ್ರದ ಸಚಿವರೊಬ್ಬರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಹೂಡಿಕೆದಾರರು ತಮಗೆ ಅನುಕೂಲಕರವಾದ ಪ್ರದೇಶಗಳಲ್ಲಿ ಬಂಡವಾಳ ಹೂಡುತ್ತಾರೆ. ಕರ್ನಾಟಕದಲ್ಲಿ ಬಹಳಷ್ಟು ಹೂಡಿಕೆದಾರರು ಬಂಡವಾಳ ಈಗಾಗಲೇ ಹೂಡಿಕೆ ಮಾಡಿದ್ದು, ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗಿರುವ ಬಗ್ಗೆ ದೂರಿದ್ದಾರೆಯೇ? ಐಫೋನ್ ತಯಾರಿಕೆಯ ದೊಡ್ಡ ಹೂಡಿಕೆ ಕರ್ನಾಟಕದಲ್ಲಿಯೇ ಆಗಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…