ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್ಖಾನ್ ಅವರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗುರುತಿಸದೆ ರಾಜರನ್ನು ಅಥವಾ ಚಲನಚಿತ್ರ ನಟರನ್ನು ಗುರುತಿಸಿ ಅವರಿಗೆ ಟಿಕೆಟ್ ನೀಡಿ ಪ್ರಜೆಗಳಲ್ಲಿ ಮತ ಕೇಳಿದರೆ, ಪ್ರಜೆಗಳು ಮತಗಳನ್ನು ಏಕೆ ಕೊಡಬೇಕೆಂದು ಬಿಜೆಪಿ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.
ರಾಜರ ಮಹಾರಾಜರ ಮೇಲೆ ಅಪಾರ ಗೌರವವಿದ್ದು, ರಾಜಕೀಯ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರ ಕೊಡುಗೆ ಏನು? ಬಿಜೆಪಿ ಒಕ್ಕಲಿಗರ ಕ್ಷೇತ್ರದ ಅನೇಕ ನಾಯಕರಿಗೆ ಟಿಕೆಟ್ ತಪ್ಪಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತ್ಯಾತೀತತೆ ಹಾಗೂ ಕುಟುಂಬ ರಾಜಕಾರಣಕ್ಕೆ ಬೆಂಬಲ ನೀಡದೆ ಎಂ.ಲಕ್ಷಣ್ ಅವರಿಗೆ ಟಿಕೆಟ್ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷವೂ ರಾಜರಿಗೆ ಟಿಕೆಟ್ ನೀಡಿದೆ. ಯದುವೀರ್ ಅವರು ಏನು ಮಹಾತ್ಮ ಗಾಂಧಿಯವರ ಎಂದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯದುವೀರ್ ಅವರ ಸಮಾಜಕ್ಕೆ ಕೊಡುಗು ಏನು? ಬಿಜೆಪಿ ಪಕ್ಷವೂ ರಾಜರನ್ನು ಕರೆದು ಮತದಾರರಲ್ಲಿ ಮತ ಭಿಕ್ಷೆ ಕೇಳುವಂತೆ ರಾಜರನ್ನು ಬೀದಿಗೆ ತಂದಿದ್ದಾರೆ. ರಾಜರ ಮೇಲೆ ಗೌರವವಿದ್ದರೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಮಾಜ ಸೇವೆ ಮಾಡುವ ಗುಣವಂತ, ಹೋರಾಟಗಾರರಾದ ಎಂ.ಲಕ್ಷ್ಮಣ್ ಅವರಿಗೆ ದಯಮಾಡಿ ಮತದಾರರು ಮತ ನೀಡುವಂತೆ ಕೇಳಿದ್ದಾರೆ.
ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ನಗರ ಉಪಾಧ್ಯಕ್ಷ ಯೋಗೇಂದ್ರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…