ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್ಖಾನ್ ಅವರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗುರುತಿಸದೆ ರಾಜರನ್ನು ಅಥವಾ ಚಲನಚಿತ್ರ ನಟರನ್ನು ಗುರುತಿಸಿ ಅವರಿಗೆ ಟಿಕೆಟ್ ನೀಡಿ ಪ್ರಜೆಗಳಲ್ಲಿ ಮತ ಕೇಳಿದರೆ, ಪ್ರಜೆಗಳು ಮತಗಳನ್ನು ಏಕೆ ಕೊಡಬೇಕೆಂದು ಬಿಜೆಪಿ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.
ರಾಜರ ಮಹಾರಾಜರ ಮೇಲೆ ಅಪಾರ ಗೌರವವಿದ್ದು, ರಾಜಕೀಯ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರ ಕೊಡುಗೆ ಏನು? ಬಿಜೆಪಿ ಒಕ್ಕಲಿಗರ ಕ್ಷೇತ್ರದ ಅನೇಕ ನಾಯಕರಿಗೆ ಟಿಕೆಟ್ ತಪ್ಪಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತ್ಯಾತೀತತೆ ಹಾಗೂ ಕುಟುಂಬ ರಾಜಕಾರಣಕ್ಕೆ ಬೆಂಬಲ ನೀಡದೆ ಎಂ.ಲಕ್ಷಣ್ ಅವರಿಗೆ ಟಿಕೆಟ್ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷವೂ ರಾಜರಿಗೆ ಟಿಕೆಟ್ ನೀಡಿದೆ. ಯದುವೀರ್ ಅವರು ಏನು ಮಹಾತ್ಮ ಗಾಂಧಿಯವರ ಎಂದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯದುವೀರ್ ಅವರ ಸಮಾಜಕ್ಕೆ ಕೊಡುಗು ಏನು? ಬಿಜೆಪಿ ಪಕ್ಷವೂ ರಾಜರನ್ನು ಕರೆದು ಮತದಾರರಲ್ಲಿ ಮತ ಭಿಕ್ಷೆ ಕೇಳುವಂತೆ ರಾಜರನ್ನು ಬೀದಿಗೆ ತಂದಿದ್ದಾರೆ. ರಾಜರ ಮೇಲೆ ಗೌರವವಿದ್ದರೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಮಾಜ ಸೇವೆ ಮಾಡುವ ಗುಣವಂತ, ಹೋರಾಟಗಾರರಾದ ಎಂ.ಲಕ್ಷ್ಮಣ್ ಅವರಿಗೆ ದಯಮಾಡಿ ಮತದಾರರು ಮತ ನೀಡುವಂತೆ ಕೇಳಿದ್ದಾರೆ.
ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ನಗರ ಉಪಾಧ್ಯಕ್ಷ ಯೋಗೇಂದ್ರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…