ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್ಖಾನ್ ಅವರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗುರುತಿಸದೆ ರಾಜರನ್ನು ಅಥವಾ ಚಲನಚಿತ್ರ ನಟರನ್ನು ಗುರುತಿಸಿ ಅವರಿಗೆ ಟಿಕೆಟ್ ನೀಡಿ ಪ್ರಜೆಗಳಲ್ಲಿ ಮತ ಕೇಳಿದರೆ, ಪ್ರಜೆಗಳು ಮತಗಳನ್ನು ಏಕೆ ಕೊಡಬೇಕೆಂದು ಬಿಜೆಪಿ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.
ರಾಜರ ಮಹಾರಾಜರ ಮೇಲೆ ಅಪಾರ ಗೌರವವಿದ್ದು, ರಾಜಕೀಯ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರ ಕೊಡುಗೆ ಏನು? ಬಿಜೆಪಿ ಒಕ್ಕಲಿಗರ ಕ್ಷೇತ್ರದ ಅನೇಕ ನಾಯಕರಿಗೆ ಟಿಕೆಟ್ ತಪ್ಪಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತ್ಯಾತೀತತೆ ಹಾಗೂ ಕುಟುಂಬ ರಾಜಕಾರಣಕ್ಕೆ ಬೆಂಬಲ ನೀಡದೆ ಎಂ.ಲಕ್ಷಣ್ ಅವರಿಗೆ ಟಿಕೆಟ್ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷವೂ ರಾಜರಿಗೆ ಟಿಕೆಟ್ ನೀಡಿದೆ. ಯದುವೀರ್ ಅವರು ಏನು ಮಹಾತ್ಮ ಗಾಂಧಿಯವರ ಎಂದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯದುವೀರ್ ಅವರ ಸಮಾಜಕ್ಕೆ ಕೊಡುಗು ಏನು? ಬಿಜೆಪಿ ಪಕ್ಷವೂ ರಾಜರನ್ನು ಕರೆದು ಮತದಾರರಲ್ಲಿ ಮತ ಭಿಕ್ಷೆ ಕೇಳುವಂತೆ ರಾಜರನ್ನು ಬೀದಿಗೆ ತಂದಿದ್ದಾರೆ. ರಾಜರ ಮೇಲೆ ಗೌರವವಿದ್ದರೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಮಾಜ ಸೇವೆ ಮಾಡುವ ಗುಣವಂತ, ಹೋರಾಟಗಾರರಾದ ಎಂ.ಲಕ್ಷ್ಮಣ್ ಅವರಿಗೆ ದಯಮಾಡಿ ಮತದಾರರು ಮತ ನೀಡುವಂತೆ ಕೇಳಿದ್ದಾರೆ.
ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ನಗರ ಉಪಾಧ್ಯಕ್ಷ ಯೋಗೇಂದ್ರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…