ಮೈಸೂರು

ಸಾಕ್ಷಾತ್ ಶ್ರೀರಾಮನೇ ಪ್ರತ್ಯಕ್ಷವಾಗಿ ಬಂದರೂ ಭಾರತ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ : ಡಾ. ಸುಧಾಕರ ಹೊಸಳ್ಳಿ

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನ ನಮ್ಮನ್ನಷ್ಟೇ ಅಲ್ಲ, ಭಾರತಾಂಬೆಯನ್ನೇ ರಕ್ಷಣೆ ಮಾಡುತ್ತಿದೆ. ಈ ನೆಲ ಇರುವವರೆಗೂ ಸಂವಿಧಾನ ಶಾಶ್ವತವಾಗಿರುತ್ತದೆ. ಈ ದೇಶದ ಬಹತೇಕ ಜನರು ಆರಾಧಿಸುವ ಸಾಕ್ಷಾತ್ ಶ್ರೀರಾಮನೇ ಪ್ರತ್ಯಕ್ಷವಾಗಿ ಬಂದರೂ ಭಾರತ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿರ್ದೇಶಕ ಡಾ.ಸುಧಾಕರ ಹೊಸಳ್ಳಿ ಅಭಿಪ್ರಾಯಪಟ್ಟರು.

ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೩ನೇ ಜಯತೋತ್ಸವದ ಕಾರ್ಯಕ್ರಮವನ್ನು ನಗರದ ಕೃಷ್ಣಮೂರ್ತಿ ಪುರಂ ಬಳಿ ಇರುವ ಶಾರದಾ ವಿಲಾಸ ಕಾಲೇಜಿನ ಪ್ರೊ.ಚಿನ್ನಸ್ವಾಮಿ ಶೆಟ್ಟಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನ ಅದೊಂದು ಪುಸ್ತಕ ರೂಪದ ದಾಖಲೆ ಅಲ್ಲ ಅಥವಾ ಎರವಲು ಸಂವಿಧಾನವೂ ಅಲ್ಲ. ದೇಶದ ಜನರ ಬದುಕು ಮತ್ತು ಭವಿಷ್ಯವನ್ನು ನಿರ್ಧರಿಸುವ ಜೀವಂತ ಶಾಸನ. ನಮ್ಮ ಸಂವಿಧಾನದ ಬಗ್ಗೆ ಗೌರವ, ಆಸಕ್ತಿ ಮತ್ತು ಅಧಿಕೃತ ಮಾಹಿತಿಯನ್ನು ಈ ದೇಶದ ಯುವ ಜನರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂವಿಧಾನವನ್ನು ಅರ್ಥವಾಡಿಕೊಳ್ಳದೇ ರೂಪಿಸಲ್ಪಪಟ್ಟ ಅರ್ಥಶಾಸ್ತ್ರ ಮತ್ತು ಇತಿಹಾಸ ವ್ಯರ್ಥವಾಗಿ ಬಿಡುತ್ತದೆ. ಆದ್ದರಿಂದ ಪ್ರತಿಯೊಂದು ವಿಷಯದ ಪ್ರತಿಪಾದನೆಗೂ ಸಂವಿಧಾನವೇ ಅಡಿಪಾವಾಗಬೇಕು. ಅಂಬೇಡ್ಕರ್ ಅವರ ಕುರಿತಾಗಿ ಎಷ್ಟೋ ವಿಷಯಗಳು ಜನಸಾಮಾನ್ಯರಿಗೆ ತಲುಪಿಲ್ಲ . ಅವುಗಳನ್ನು ಜನರಿಗೆ ತಲುಪಿಸುವ ಕೆಲಸ ಯುವ ಜನತೆಯಿಂದ ಆಗಬೇಕು ಎಂದು ಹೇಳಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿಯೇ ಭಾರತದ ಅಸ್ಮಿತೆಯನ್ನು ಎತ್ತಿ ಹಿಡಿದಿದ್ದ ಮಹಾನ್ ರಾಷ್ಟ್ರ ಪ್ರೇಮಿ. ಪ್ರತಿಯೊಬ್ಬ ಭಾರತೀಯರೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರೀತಿಯಲ್ಲಿ ದೇಶವನ್ನು ಪ್ರೀತಿಸಿದರೆ ಭಾರತ ಪ್ರಪಂಚದ ಅತಿ ದೊಡ್ಡ ರಾಷ್ಟ್ರವಾಗುವುದರಲ್ಲಿ ಸಂಶಯವೇ ಇಲ್ಲ. ಜಗತ್ತಿನ ಬಹುತೇಕ ರಾಷ್ಟ್ರಗಳು ಅಂಬೇಡ್ಕರ್ ಅವರ ಜ್ಞಾನ ಮತ್ತು ಸಾಮಾಜಿಕ ಸಮಾನತೆಯನ್ನು ಸಾಧಿಸಲು ಅವರು ಪಟ್ಟ ಪರಿಶ್ರಮವನ್ನು ಗುರುತಿಸಿ ಒಪ್ಪಿಕೊಂಡಿವೆ ಎಂದರು.

ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎನ್. ಚಂದ್ರಶೇಖರ್ ಕಾರ್ಕ್ರಯಮದಲ್ಲಿ ಉಪಸ್ಥಿತರಿದ್ದರು.

 

ಜಾತಿ ವ್ಯವಸ್ಥೆ ಮತ್ತು ಅಸ್ಪಶ್ಯತೆ ಈ ದೇಶದ ಶೋಷಿತ ಸಮುದಾಯಗಳನ್ನು ಇನ್ನಿಲ್ಲದಂತೆ ಶೋಷಣೆ ಮಾಡಿತ್ತು. ಇದೆಲ್ಲದರ ಅರಿವಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರು ಅಸ್ಪಶ್ಯತಾ ಆಚರಣೆ ಅಪರಾಧ ಎಂದು ಕಾನೂನು ಮಾಡಿದರು. ಜಗತ್ತಿನಲ್ಲಿ ಅಸ್ಪಶ್ಯತೆಯತಹ ಕ್ರೂರ ಆಚರಣೆಯನ್ನು ಅಪರಾಧ ಎಂದು ಕಾನೂನು ಮಾಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ-

  • ಡಾ. ಸುಧಾಕರ ಹೊಸಳ್ಳಿ , ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ನಿರ್ದೇಶಕ.
ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago