ಮೈಸೂರು

ಸಾಕ್ಷಾತ್ ಶ್ರೀರಾಮನೇ ಪ್ರತ್ಯಕ್ಷವಾಗಿ ಬಂದರೂ ಭಾರತ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ : ಡಾ. ಸುಧಾಕರ ಹೊಸಳ್ಳಿ

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನ ನಮ್ಮನ್ನಷ್ಟೇ ಅಲ್ಲ, ಭಾರತಾಂಬೆಯನ್ನೇ ರಕ್ಷಣೆ ಮಾಡುತ್ತಿದೆ. ಈ ನೆಲ ಇರುವವರೆಗೂ ಸಂವಿಧಾನ ಶಾಶ್ವತವಾಗಿರುತ್ತದೆ. ಈ ದೇಶದ ಬಹತೇಕ ಜನರು ಆರಾಧಿಸುವ ಸಾಕ್ಷಾತ್ ಶ್ರೀರಾಮನೇ ಪ್ರತ್ಯಕ್ಷವಾಗಿ ಬಂದರೂ ಭಾರತ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿರ್ದೇಶಕ ಡಾ.ಸುಧಾಕರ ಹೊಸಳ್ಳಿ ಅಭಿಪ್ರಾಯಪಟ್ಟರು.

ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೩ನೇ ಜಯತೋತ್ಸವದ ಕಾರ್ಯಕ್ರಮವನ್ನು ನಗರದ ಕೃಷ್ಣಮೂರ್ತಿ ಪುರಂ ಬಳಿ ಇರುವ ಶಾರದಾ ವಿಲಾಸ ಕಾಲೇಜಿನ ಪ್ರೊ.ಚಿನ್ನಸ್ವಾಮಿ ಶೆಟ್ಟಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನ ಅದೊಂದು ಪುಸ್ತಕ ರೂಪದ ದಾಖಲೆ ಅಲ್ಲ ಅಥವಾ ಎರವಲು ಸಂವಿಧಾನವೂ ಅಲ್ಲ. ದೇಶದ ಜನರ ಬದುಕು ಮತ್ತು ಭವಿಷ್ಯವನ್ನು ನಿರ್ಧರಿಸುವ ಜೀವಂತ ಶಾಸನ. ನಮ್ಮ ಸಂವಿಧಾನದ ಬಗ್ಗೆ ಗೌರವ, ಆಸಕ್ತಿ ಮತ್ತು ಅಧಿಕೃತ ಮಾಹಿತಿಯನ್ನು ಈ ದೇಶದ ಯುವ ಜನರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂವಿಧಾನವನ್ನು ಅರ್ಥವಾಡಿಕೊಳ್ಳದೇ ರೂಪಿಸಲ್ಪಪಟ್ಟ ಅರ್ಥಶಾಸ್ತ್ರ ಮತ್ತು ಇತಿಹಾಸ ವ್ಯರ್ಥವಾಗಿ ಬಿಡುತ್ತದೆ. ಆದ್ದರಿಂದ ಪ್ರತಿಯೊಂದು ವಿಷಯದ ಪ್ರತಿಪಾದನೆಗೂ ಸಂವಿಧಾನವೇ ಅಡಿಪಾವಾಗಬೇಕು. ಅಂಬೇಡ್ಕರ್ ಅವರ ಕುರಿತಾಗಿ ಎಷ್ಟೋ ವಿಷಯಗಳು ಜನಸಾಮಾನ್ಯರಿಗೆ ತಲುಪಿಲ್ಲ . ಅವುಗಳನ್ನು ಜನರಿಗೆ ತಲುಪಿಸುವ ಕೆಲಸ ಯುವ ಜನತೆಯಿಂದ ಆಗಬೇಕು ಎಂದು ಹೇಳಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿಯೇ ಭಾರತದ ಅಸ್ಮಿತೆಯನ್ನು ಎತ್ತಿ ಹಿಡಿದಿದ್ದ ಮಹಾನ್ ರಾಷ್ಟ್ರ ಪ್ರೇಮಿ. ಪ್ರತಿಯೊಬ್ಬ ಭಾರತೀಯರೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರೀತಿಯಲ್ಲಿ ದೇಶವನ್ನು ಪ್ರೀತಿಸಿದರೆ ಭಾರತ ಪ್ರಪಂಚದ ಅತಿ ದೊಡ್ಡ ರಾಷ್ಟ್ರವಾಗುವುದರಲ್ಲಿ ಸಂಶಯವೇ ಇಲ್ಲ. ಜಗತ್ತಿನ ಬಹುತೇಕ ರಾಷ್ಟ್ರಗಳು ಅಂಬೇಡ್ಕರ್ ಅವರ ಜ್ಞಾನ ಮತ್ತು ಸಾಮಾಜಿಕ ಸಮಾನತೆಯನ್ನು ಸಾಧಿಸಲು ಅವರು ಪಟ್ಟ ಪರಿಶ್ರಮವನ್ನು ಗುರುತಿಸಿ ಒಪ್ಪಿಕೊಂಡಿವೆ ಎಂದರು.

ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎನ್. ಚಂದ್ರಶೇಖರ್ ಕಾರ್ಕ್ರಯಮದಲ್ಲಿ ಉಪಸ್ಥಿತರಿದ್ದರು.

 

ಜಾತಿ ವ್ಯವಸ್ಥೆ ಮತ್ತು ಅಸ್ಪಶ್ಯತೆ ಈ ದೇಶದ ಶೋಷಿತ ಸಮುದಾಯಗಳನ್ನು ಇನ್ನಿಲ್ಲದಂತೆ ಶೋಷಣೆ ಮಾಡಿತ್ತು. ಇದೆಲ್ಲದರ ಅರಿವಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರು ಅಸ್ಪಶ್ಯತಾ ಆಚರಣೆ ಅಪರಾಧ ಎಂದು ಕಾನೂನು ಮಾಡಿದರು. ಜಗತ್ತಿನಲ್ಲಿ ಅಸ್ಪಶ್ಯತೆಯತಹ ಕ್ರೂರ ಆಚರಣೆಯನ್ನು ಅಪರಾಧ ಎಂದು ಕಾನೂನು ಮಾಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ-

  • ಡಾ. ಸುಧಾಕರ ಹೊಸಳ್ಳಿ , ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ನಿರ್ದೇಶಕ.
ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago