ಮೈಸೂರು

ಕೈಗಾರಿಕೆ ಕಂಪನಿಗಳು ಸಮಾಜ ಸೇವೆಗೆ ಮುಂದಾಗಬೇಕು : ದರ್ಶನ್ ಧ್ರುವನಾರಾಯಣ್

ನಂಜನಗೂಡು : ದೇಶದ ಪ್ರತಿಯೊಂದು ಕೈಗಾರಿಕೆ ಹಾಗೂ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಸಮಾಜ ಸೇವೆಗೆ ಮುಂದಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಸಲಹೆ ನೀಡಿದರು.

ನಗರದ ಅಶೋಕಪುರಂ ಬಡಾವಣೆಯಲ್ಲಿ ನೆಸ್ಲೆ ಕಂಪನಿಯು ಸಿಎಸ್‌ಆರ್ ಯೋಜನೆಯಡಿ ನಿರ್ಮಿಸಿರುವ ಶೌಚಾಲಯ ಉದ್ಘಾಟಿಸಿ ಮಾತನಾಡಿದ ಅವರು ನೆಸ್ಲೆ ಕಂಪನಿಯು ಅಶೋಕಪುರಂ ಬಡಾವಣೆಯಲ್ಲಿ 3.23 ಲಕ್ಷ ರೂಪಾಯಿ ವೆಚ್ಚದಲ್ಲಿ ಆಧುನಿಕ ಶೌಚಾಲಯವನ್ನು ನಿರ್ಮಿಸಿದೆ. 90ಕ್ಕೂ ಹೆಚ್ಚು ಸಮಾಜಮುಖಿ ಕೆಲಸದಲ್ಲಿ ತೊಡಗಿರುವ ನೆಸ್ಲೆ ಕಂಪನಿಯು ಈವರೆಗೆ 14,344 ಶೌಚಾಲಯ, 25ಕ್ಕೂ ಹೆಚ್ಚು ಆಯ್ದ ಗ್ರಾಮದಲ್ಲಿ 16,500 ಕ್ಕೂ ಹೆಚ್ಚು ಶುದ್ಧ ಕುಡಿಯುವ ಘಟಕಗಳನ್ನು ನಿರ್ಮಿಸುವ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಅಶೋಕಪುರಂನಲ್ಲಿ ಸಂಸ್ಥೆಯು ನಿರ್ಮಿಸಿರುವ ಮೂರು ಶೌಚಾಲಯಗಳನ್ನು ಇಲ್ಲಿನ ನಿವಾಸಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷರಾದ ಸಿ.ಎಂ.ಶಂಕರ್, ಕುರಹಟ್ಟಿ ಮಹೇಶ್, ಮ್ಯಾನೇಜರ್ ಶ್ರೀನಿವಾಸ್ ಮೂರ್ತಿ, ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಪ್ರಾಂಶುಪಾಲ ಮುದ್ದುಮಾದೇಗೌಡ, ಹೌಸಿಂಗ್ ಬೋರ್ಡ್ ರವಿ, ನಗರಸಭಾ ಸದಸ್ಯ ಮಂಗಳಾಮ್ಮ ಪ್ರಕಾಶ್, ಮುಖಂಡರಾದ ಸ್ವಾಮಿ, ದೇವರಾಜು, ಸುಂದರ್, ಶ್ರೀನಿವಾಸ್, ಪ್ರಕಾಶ್ ಉಪಸ್ಥಿತರಿದ್ದರು.

lokesh

Recent Posts

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

15 mins ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

30 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

1 hour ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

2 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

5 hours ago