ನಂಜನಗೂಡು : ದೇಶದ ಪ್ರತಿಯೊಂದು ಕೈಗಾರಿಕೆ ಹಾಗೂ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಸಮಾಜ ಸೇವೆಗೆ ಮುಂದಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಸಲಹೆ ನೀಡಿದರು.
ನಗರದ ಅಶೋಕಪುರಂ ಬಡಾವಣೆಯಲ್ಲಿ ನೆಸ್ಲೆ ಕಂಪನಿಯು ಸಿಎಸ್ಆರ್ ಯೋಜನೆಯಡಿ ನಿರ್ಮಿಸಿರುವ ಶೌಚಾಲಯ ಉದ್ಘಾಟಿಸಿ ಮಾತನಾಡಿದ ಅವರು ನೆಸ್ಲೆ ಕಂಪನಿಯು ಅಶೋಕಪುರಂ ಬಡಾವಣೆಯಲ್ಲಿ 3.23 ಲಕ್ಷ ರೂಪಾಯಿ ವೆಚ್ಚದಲ್ಲಿ ಆಧುನಿಕ ಶೌಚಾಲಯವನ್ನು ನಿರ್ಮಿಸಿದೆ. 90ಕ್ಕೂ ಹೆಚ್ಚು ಸಮಾಜಮುಖಿ ಕೆಲಸದಲ್ಲಿ ತೊಡಗಿರುವ ನೆಸ್ಲೆ ಕಂಪನಿಯು ಈವರೆಗೆ 14,344 ಶೌಚಾಲಯ, 25ಕ್ಕೂ ಹೆಚ್ಚು ಆಯ್ದ ಗ್ರಾಮದಲ್ಲಿ 16,500 ಕ್ಕೂ ಹೆಚ್ಚು ಶುದ್ಧ ಕುಡಿಯುವ ಘಟಕಗಳನ್ನು ನಿರ್ಮಿಸುವ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಅಶೋಕಪುರಂನಲ್ಲಿ ಸಂಸ್ಥೆಯು ನಿರ್ಮಿಸಿರುವ ಮೂರು ಶೌಚಾಲಯಗಳನ್ನು ಇಲ್ಲಿನ ನಿವಾಸಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷರಾದ ಸಿ.ಎಂ.ಶಂಕರ್, ಕುರಹಟ್ಟಿ ಮಹೇಶ್, ಮ್ಯಾನೇಜರ್ ಶ್ರೀನಿವಾಸ್ ಮೂರ್ತಿ, ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಪ್ರಾಂಶುಪಾಲ ಮುದ್ದುಮಾದೇಗೌಡ, ಹೌಸಿಂಗ್ ಬೋರ್ಡ್ ರವಿ, ನಗರಸಭಾ ಸದಸ್ಯ ಮಂಗಳಾಮ್ಮ ಪ್ರಕಾಶ್, ಮುಖಂಡರಾದ ಸ್ವಾಮಿ, ದೇವರಾಜು, ಸುಂದರ್, ಶ್ರೀನಿವಾಸ್, ಪ್ರಕಾಶ್ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…