ಮೈಸೂರು

ಕೈಗಾರಿಕೆ ಕಂಪನಿಗಳು ಸಮಾಜ ಸೇವೆಗೆ ಮುಂದಾಗಬೇಕು : ದರ್ಶನ್ ಧ್ರುವನಾರಾಯಣ್

ನಂಜನಗೂಡು : ದೇಶದ ಪ್ರತಿಯೊಂದು ಕೈಗಾರಿಕೆ ಹಾಗೂ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಸಮಾಜ ಸೇವೆಗೆ ಮುಂದಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಸಲಹೆ ನೀಡಿದರು.

ನಗರದ ಅಶೋಕಪುರಂ ಬಡಾವಣೆಯಲ್ಲಿ ನೆಸ್ಲೆ ಕಂಪನಿಯು ಸಿಎಸ್‌ಆರ್ ಯೋಜನೆಯಡಿ ನಿರ್ಮಿಸಿರುವ ಶೌಚಾಲಯ ಉದ್ಘಾಟಿಸಿ ಮಾತನಾಡಿದ ಅವರು ನೆಸ್ಲೆ ಕಂಪನಿಯು ಅಶೋಕಪುರಂ ಬಡಾವಣೆಯಲ್ಲಿ 3.23 ಲಕ್ಷ ರೂಪಾಯಿ ವೆಚ್ಚದಲ್ಲಿ ಆಧುನಿಕ ಶೌಚಾಲಯವನ್ನು ನಿರ್ಮಿಸಿದೆ. 90ಕ್ಕೂ ಹೆಚ್ಚು ಸಮಾಜಮುಖಿ ಕೆಲಸದಲ್ಲಿ ತೊಡಗಿರುವ ನೆಸ್ಲೆ ಕಂಪನಿಯು ಈವರೆಗೆ 14,344 ಶೌಚಾಲಯ, 25ಕ್ಕೂ ಹೆಚ್ಚು ಆಯ್ದ ಗ್ರಾಮದಲ್ಲಿ 16,500 ಕ್ಕೂ ಹೆಚ್ಚು ಶುದ್ಧ ಕುಡಿಯುವ ಘಟಕಗಳನ್ನು ನಿರ್ಮಿಸುವ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಅಶೋಕಪುರಂನಲ್ಲಿ ಸಂಸ್ಥೆಯು ನಿರ್ಮಿಸಿರುವ ಮೂರು ಶೌಚಾಲಯಗಳನ್ನು ಇಲ್ಲಿನ ನಿವಾಸಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷರಾದ ಸಿ.ಎಂ.ಶಂಕರ್, ಕುರಹಟ್ಟಿ ಮಹೇಶ್, ಮ್ಯಾನೇಜರ್ ಶ್ರೀನಿವಾಸ್ ಮೂರ್ತಿ, ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಪ್ರಾಂಶುಪಾಲ ಮುದ್ದುಮಾದೇಗೌಡ, ಹೌಸಿಂಗ್ ಬೋರ್ಡ್ ರವಿ, ನಗರಸಭಾ ಸದಸ್ಯ ಮಂಗಳಾಮ್ಮ ಪ್ರಕಾಶ್, ಮುಖಂಡರಾದ ಸ್ವಾಮಿ, ದೇವರಾಜು, ಸುಂದರ್, ಶ್ರೀನಿವಾಸ್, ಪ್ರಕಾಶ್ ಉಪಸ್ಥಿತರಿದ್ದರು.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago