ಮೈಸೂರು: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಅವರು ಮುಡಾ ಪ್ರಕರಣದಲ್ಲಿ ಲೋಕಾಯುಕ್ತದ ಮೇಲೆ ಪ್ರಭಾವ ಬೀರುತ್ತಿರುವ ಅನುಮಾನವಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದೇನೆ. ಅಲ್ಲದೇ, ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವಂತೆ ಮಾಡಿ ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳಿಗೆ 25 ಪುಟಗಳ ಮಾಹಿತಿ ನೀಡಿದ್ದೇನೆ ಎಂದರು.
ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು, ಆಗಾಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುವುದನ್ನು ನೋಡಿದರೆ ಲೋಕಾಯುಕ್ತ ಅಧಿಕಾರಗಳ ಮೇಲೆ ಪ್ರಭಾವ ಬೀರಲು ಬರುತ್ತಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆದರೆ, ಈ ಬಗ್ಗೆ ಅನುಮಾನ ಬಗೆ ಹರಿಸಿಕೊಳ್ಳಲು ಲೋಕಾಯುಕ್ತ ಕಚೇರಿಯಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲ. ಹೀಗಾಗಿ ಲೋಕಾಯುಕ್ತ ಕಚೇರಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಕೆಲವು ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಆ ಎಲ್ಲಾ ಅಂಶಗಳನ್ನು ನಾನು ಬಹಿರಂಗ ಪಡಿಸಿದ್ದೇನೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ವೈಟ್ನರ್ ಹಾಕಿರುವ ಮಾಹಿತಿಯನ್ನು ಸಹ ಕೋರ್ಟ್ ನೀಡಿರಲಿಲ್ಲ. ಸಿದ್ದರಾಮಯ್ಯ ಯಾವುದೇ ಕಾರ್ಯಕ್ರಮಗಳಿಗೆ ಹೋದರೂ ಪ್ರಚೋದನೆಕಾರಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಹೀಗಾಗಿ ನನಗೆ ನನ್ನ ಕುಟುಂಬಕ್ಕೆ ಭಯವಾಗಿದೆ ಎಂದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…