ಮೈಸೂರು

ಶಿಕ್ಷಕರ ಕ್ಷೇತ್ರದಲ್ಲಿ ದಲಿತ, ಹಿಂದುಳಿತ ವರ್ಗಕ್ಕೆ ಅನ್ಯಾಯ: ಪುಟ್ಟಸಿದ್ದಶೆಟ್ಟಿ ಆರೋಪ

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.

ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಪ್ರಬಲ ಜಾತಿಗಳಿಗೆ ಅವಕಾಶ ನೀಡುತ್ತಿವೆ, ಮೈಸೂರು ಚಾಮರಾಜನಗರ ಜಿಲ್ಲೆಗಳ ಆಕಾಂಕ್ಷಿಗಳಿಗೆ ಅವಕಾಶ ನೀಡುತ್ತಿಲ್ಲ, ಇದರಿಂದ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅನ್ಯಾಯವಾಗುತ್ತಿದೆ. ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ದೊಡ್ಡ ಸಮಾಜಗಳಿಗೆ ಅವಕಾಶ ಮಾಡಿಕೊಡುವುದು ಎಷ್ಟು ಸರಿ? ಸಿದ್ದರಾಮಯ್ಯನವರ 14 ಬಜೆಟ್ ಗಳಲ್ಲಿಯೂ ಕೂಡ ಶಿಕ್ಷಕರಿಗೆ ಅನ್ಯಾಯವಾಗಿದೆ ಎಂದು ದೂರಿದರು.

ಅತಿಥಿ ಶಿಕ್ಷಕರಿಗೆ ಏಳು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಹೋರಾಟ ಮಾಡುವವರು ಯಾರು ಇಲ್ಲ, 1986 ರಲ್ಲಿ ನಾನು ಶಿಕ್ಷಕರ ಸಂಘವನ್ನು ಕಟ್ಟಿ, ಶಿಕ್ಷಣ ವೃತ್ತಿಯನ್ನು ಗೌರವಿಸಿಕೊಂಡು ಶಿಕ್ಷಕರಿಗಾಗಿಯೇ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ಶಿಕ್ಷಕರು ನನ್ನ ಕೆಲಸ ಮತ್ತು ಹೋರಾಟವನ್ನು ಗಮನದಲ್ಲಿಟ್ಟುಕೊಂಡು ಮತಗಟ್ಟೆಗೆ ಹೋದಾಗ ನನಗೆ ಮೊದಲ ಪ್ರಾಶಸ್ತ್ಯದ ಮತ ಕೊಡಿ ಎಂದು ಕೋರಿಕೊಂಡರು.

ಸ್ವಾಭಿಮಾನಿ ಶಿಕ್ಷಕರ ವೇದಿಕೆ ನನ್ನದು, ಈ ವೇದಿಕೆ ಹೆಸರಲ್ಲಿ ಶ್ರೀಕಂಠೇಗೌಡ ನಾಮಪತ್ರ ಸಲ್ಲಿಸುವುದು ಎಷ್ಟು ಸರಿ? ಇವನು ಪಕ್ಷ ಜಾತಿವಾದಿ, ಚಲನಚಿತ್ರ ನಟ ಅಂಬರೀಶ್ ಅವರ ಪತ್ನಿ ಸುಮಲತಾ ರವರನ್ನು ಗೌಡ್ತಿಯಲ್ಲ ಎಂದು ಆರೋಪಿಸಿದ್ದರು. ಜಾತಿ ಹೆಸರಲ್ಲಿ ರಾಜಕೀಯ ಮಾಡುವವರನ್ನು ತಿರಸ್ಕರಿಸಿ ನಮ್ಮಂತಹ ಹಿಂದುಳಿದ ವರ್ಗದವರನ್ನು ಈ ಬಾರಿ ಚುನಾವಣೆಯಲ್ಲಿ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ರಾಜ್ಯ ಕಾಯಕ ಸಮಾಜಗಳ ಸಂಚಾಲಕ ಕೆಂಪಶೆಟ್ಟಿ, ಸಂಘದ ನಿರ್ದೇಶಕ ಬಸಲಾಪುರ ಕುಮಾರ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

9 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

9 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

9 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

12 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

12 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

12 hours ago