ಮೈಸೂರು

ಶಿಕ್ಷಕರ ಕ್ಷೇತ್ರದಲ್ಲಿ ದಲಿತ, ಹಿಂದುಳಿತ ವರ್ಗಕ್ಕೆ ಅನ್ಯಾಯ: ಪುಟ್ಟಸಿದ್ದಶೆಟ್ಟಿ ಆರೋಪ

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.

ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಪ್ರಬಲ ಜಾತಿಗಳಿಗೆ ಅವಕಾಶ ನೀಡುತ್ತಿವೆ, ಮೈಸೂರು ಚಾಮರಾಜನಗರ ಜಿಲ್ಲೆಗಳ ಆಕಾಂಕ್ಷಿಗಳಿಗೆ ಅವಕಾಶ ನೀಡುತ್ತಿಲ್ಲ, ಇದರಿಂದ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅನ್ಯಾಯವಾಗುತ್ತಿದೆ. ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ದೊಡ್ಡ ಸಮಾಜಗಳಿಗೆ ಅವಕಾಶ ಮಾಡಿಕೊಡುವುದು ಎಷ್ಟು ಸರಿ? ಸಿದ್ದರಾಮಯ್ಯನವರ 14 ಬಜೆಟ್ ಗಳಲ್ಲಿಯೂ ಕೂಡ ಶಿಕ್ಷಕರಿಗೆ ಅನ್ಯಾಯವಾಗಿದೆ ಎಂದು ದೂರಿದರು.

ಅತಿಥಿ ಶಿಕ್ಷಕರಿಗೆ ಏಳು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಹೋರಾಟ ಮಾಡುವವರು ಯಾರು ಇಲ್ಲ, 1986 ರಲ್ಲಿ ನಾನು ಶಿಕ್ಷಕರ ಸಂಘವನ್ನು ಕಟ್ಟಿ, ಶಿಕ್ಷಣ ವೃತ್ತಿಯನ್ನು ಗೌರವಿಸಿಕೊಂಡು ಶಿಕ್ಷಕರಿಗಾಗಿಯೇ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ಶಿಕ್ಷಕರು ನನ್ನ ಕೆಲಸ ಮತ್ತು ಹೋರಾಟವನ್ನು ಗಮನದಲ್ಲಿಟ್ಟುಕೊಂಡು ಮತಗಟ್ಟೆಗೆ ಹೋದಾಗ ನನಗೆ ಮೊದಲ ಪ್ರಾಶಸ್ತ್ಯದ ಮತ ಕೊಡಿ ಎಂದು ಕೋರಿಕೊಂಡರು.

ಸ್ವಾಭಿಮಾನಿ ಶಿಕ್ಷಕರ ವೇದಿಕೆ ನನ್ನದು, ಈ ವೇದಿಕೆ ಹೆಸರಲ್ಲಿ ಶ್ರೀಕಂಠೇಗೌಡ ನಾಮಪತ್ರ ಸಲ್ಲಿಸುವುದು ಎಷ್ಟು ಸರಿ? ಇವನು ಪಕ್ಷ ಜಾತಿವಾದಿ, ಚಲನಚಿತ್ರ ನಟ ಅಂಬರೀಶ್ ಅವರ ಪತ್ನಿ ಸುಮಲತಾ ರವರನ್ನು ಗೌಡ್ತಿಯಲ್ಲ ಎಂದು ಆರೋಪಿಸಿದ್ದರು. ಜಾತಿ ಹೆಸರಲ್ಲಿ ರಾಜಕೀಯ ಮಾಡುವವರನ್ನು ತಿರಸ್ಕರಿಸಿ ನಮ್ಮಂತಹ ಹಿಂದುಳಿದ ವರ್ಗದವರನ್ನು ಈ ಬಾರಿ ಚುನಾವಣೆಯಲ್ಲಿ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ರಾಜ್ಯ ಕಾಯಕ ಸಮಾಜಗಳ ಸಂಚಾಲಕ ಕೆಂಪಶೆಟ್ಟಿ, ಸಂಘದ ನಿರ್ದೇಶಕ ಬಸಲಾಪುರ ಕುಮಾರ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

1 hour ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

2 hours ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

2 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

2 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

2 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

2 hours ago