ಮೈಸೂರು

ಶಿಕ್ಷಕರ ಕ್ಷೇತ್ರದಲ್ಲಿ ದಲಿತ, ಹಿಂದುಳಿತ ವರ್ಗಕ್ಕೆ ಅನ್ಯಾಯ: ಪುಟ್ಟಸಿದ್ದಶೆಟ್ಟಿ ಆರೋಪ

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.

ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಪ್ರಬಲ ಜಾತಿಗಳಿಗೆ ಅವಕಾಶ ನೀಡುತ್ತಿವೆ, ಮೈಸೂರು ಚಾಮರಾಜನಗರ ಜಿಲ್ಲೆಗಳ ಆಕಾಂಕ್ಷಿಗಳಿಗೆ ಅವಕಾಶ ನೀಡುತ್ತಿಲ್ಲ, ಇದರಿಂದ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅನ್ಯಾಯವಾಗುತ್ತಿದೆ. ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ದೊಡ್ಡ ಸಮಾಜಗಳಿಗೆ ಅವಕಾಶ ಮಾಡಿಕೊಡುವುದು ಎಷ್ಟು ಸರಿ? ಸಿದ್ದರಾಮಯ್ಯನವರ 14 ಬಜೆಟ್ ಗಳಲ್ಲಿಯೂ ಕೂಡ ಶಿಕ್ಷಕರಿಗೆ ಅನ್ಯಾಯವಾಗಿದೆ ಎಂದು ದೂರಿದರು.

ಅತಿಥಿ ಶಿಕ್ಷಕರಿಗೆ ಏಳು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಹೋರಾಟ ಮಾಡುವವರು ಯಾರು ಇಲ್ಲ, 1986 ರಲ್ಲಿ ನಾನು ಶಿಕ್ಷಕರ ಸಂಘವನ್ನು ಕಟ್ಟಿ, ಶಿಕ್ಷಣ ವೃತ್ತಿಯನ್ನು ಗೌರವಿಸಿಕೊಂಡು ಶಿಕ್ಷಕರಿಗಾಗಿಯೇ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ಶಿಕ್ಷಕರು ನನ್ನ ಕೆಲಸ ಮತ್ತು ಹೋರಾಟವನ್ನು ಗಮನದಲ್ಲಿಟ್ಟುಕೊಂಡು ಮತಗಟ್ಟೆಗೆ ಹೋದಾಗ ನನಗೆ ಮೊದಲ ಪ್ರಾಶಸ್ತ್ಯದ ಮತ ಕೊಡಿ ಎಂದು ಕೋರಿಕೊಂಡರು.

ಸ್ವಾಭಿಮಾನಿ ಶಿಕ್ಷಕರ ವೇದಿಕೆ ನನ್ನದು, ಈ ವೇದಿಕೆ ಹೆಸರಲ್ಲಿ ಶ್ರೀಕಂಠೇಗೌಡ ನಾಮಪತ್ರ ಸಲ್ಲಿಸುವುದು ಎಷ್ಟು ಸರಿ? ಇವನು ಪಕ್ಷ ಜಾತಿವಾದಿ, ಚಲನಚಿತ್ರ ನಟ ಅಂಬರೀಶ್ ಅವರ ಪತ್ನಿ ಸುಮಲತಾ ರವರನ್ನು ಗೌಡ್ತಿಯಲ್ಲ ಎಂದು ಆರೋಪಿಸಿದ್ದರು. ಜಾತಿ ಹೆಸರಲ್ಲಿ ರಾಜಕೀಯ ಮಾಡುವವರನ್ನು ತಿರಸ್ಕರಿಸಿ ನಮ್ಮಂತಹ ಹಿಂದುಳಿದ ವರ್ಗದವರನ್ನು ಈ ಬಾರಿ ಚುನಾವಣೆಯಲ್ಲಿ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ರಾಜ್ಯ ಕಾಯಕ ಸಮಾಜಗಳ ಸಂಚಾಲಕ ಕೆಂಪಶೆಟ್ಟಿ, ಸಂಘದ ನಿರ್ದೇಶಕ ಬಸಲಾಪುರ ಕುಮಾರ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago