ಮೈಸೂರು

ಶಿಕ್ಷಕರ ಕ್ಷೇತ್ರದಲ್ಲಿ ದಲಿತ, ಹಿಂದುಳಿತ ವರ್ಗಕ್ಕೆ ಅನ್ಯಾಯ: ಪುಟ್ಟಸಿದ್ದಶೆಟ್ಟಿ ಆರೋಪ

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.

ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಪ್ರಬಲ ಜಾತಿಗಳಿಗೆ ಅವಕಾಶ ನೀಡುತ್ತಿವೆ, ಮೈಸೂರು ಚಾಮರಾಜನಗರ ಜಿಲ್ಲೆಗಳ ಆಕಾಂಕ್ಷಿಗಳಿಗೆ ಅವಕಾಶ ನೀಡುತ್ತಿಲ್ಲ, ಇದರಿಂದ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅನ್ಯಾಯವಾಗುತ್ತಿದೆ. ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ದೊಡ್ಡ ಸಮಾಜಗಳಿಗೆ ಅವಕಾಶ ಮಾಡಿಕೊಡುವುದು ಎಷ್ಟು ಸರಿ? ಸಿದ್ದರಾಮಯ್ಯನವರ 14 ಬಜೆಟ್ ಗಳಲ್ಲಿಯೂ ಕೂಡ ಶಿಕ್ಷಕರಿಗೆ ಅನ್ಯಾಯವಾಗಿದೆ ಎಂದು ದೂರಿದರು.

ಅತಿಥಿ ಶಿಕ್ಷಕರಿಗೆ ಏಳು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಹೋರಾಟ ಮಾಡುವವರು ಯಾರು ಇಲ್ಲ, 1986 ರಲ್ಲಿ ನಾನು ಶಿಕ್ಷಕರ ಸಂಘವನ್ನು ಕಟ್ಟಿ, ಶಿಕ್ಷಣ ವೃತ್ತಿಯನ್ನು ಗೌರವಿಸಿಕೊಂಡು ಶಿಕ್ಷಕರಿಗಾಗಿಯೇ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ಶಿಕ್ಷಕರು ನನ್ನ ಕೆಲಸ ಮತ್ತು ಹೋರಾಟವನ್ನು ಗಮನದಲ್ಲಿಟ್ಟುಕೊಂಡು ಮತಗಟ್ಟೆಗೆ ಹೋದಾಗ ನನಗೆ ಮೊದಲ ಪ್ರಾಶಸ್ತ್ಯದ ಮತ ಕೊಡಿ ಎಂದು ಕೋರಿಕೊಂಡರು.

ಸ್ವಾಭಿಮಾನಿ ಶಿಕ್ಷಕರ ವೇದಿಕೆ ನನ್ನದು, ಈ ವೇದಿಕೆ ಹೆಸರಲ್ಲಿ ಶ್ರೀಕಂಠೇಗೌಡ ನಾಮಪತ್ರ ಸಲ್ಲಿಸುವುದು ಎಷ್ಟು ಸರಿ? ಇವನು ಪಕ್ಷ ಜಾತಿವಾದಿ, ಚಲನಚಿತ್ರ ನಟ ಅಂಬರೀಶ್ ಅವರ ಪತ್ನಿ ಸುಮಲತಾ ರವರನ್ನು ಗೌಡ್ತಿಯಲ್ಲ ಎಂದು ಆರೋಪಿಸಿದ್ದರು. ಜಾತಿ ಹೆಸರಲ್ಲಿ ರಾಜಕೀಯ ಮಾಡುವವರನ್ನು ತಿರಸ್ಕರಿಸಿ ನಮ್ಮಂತಹ ಹಿಂದುಳಿದ ವರ್ಗದವರನ್ನು ಈ ಬಾರಿ ಚುನಾವಣೆಯಲ್ಲಿ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ರಾಜ್ಯ ಕಾಯಕ ಸಮಾಜಗಳ ಸಂಚಾಲಕ ಕೆಂಪಶೆಟ್ಟಿ, ಸಂಘದ ನಿರ್ದೇಶಕ ಬಸಲಾಪುರ ಕುಮಾರ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago