ಎಚ್.ಡಿ ಕೋಟೆ : ಅಂತರಸಂತೆ ಮೀಸಲು ಅರಣ್ಯ ವಲಯದ ದಮ್ಮನಕಟ್ಟೆ ಭಾಗದ ಕಾಡಂಚಿನ ಗ್ರಾಮಗಳಿಗೆ ಪ್ರಯೋಗಿಕವಾಗಿ ಕಾಡಿನಿಂದ ಊರುಗಳಿಗೆ ವನ್ಯಪ್ರಾಣಿಗಳು ಬರದ ಹಾಗೆ ರೈಲ್ವೆ ಕಂಬಿ ತಡೆಗೋಡೆಗಳಿಗೆ ಜಾಲರಿಮೇಸ್ ಗಳನ್ನು ಜೋಡಿಸಲಾಯಿತು.
ಎಚ್.ಡಿ. ಕೋಟೆ ಮತ್ತು ಸರಗೂರು ಭಾಗದಲ್ಲಿ ಕಾಡಿನಿಂದ ನಾಡಿಗೆ ಕಾಡುಪ್ರಾಣಿಗಳು ದಾಳಿ ಮಾಡಿ ರೈತರ ಬೆಳೆದ ಬೆಳೆನಾಶ ಮಾಡುತ್ತಿರುವುದಲ್ಲದೆ ಇತ್ತೀಚಿಗೆ ಹುಲಿದಾಳಿಯಿಂದ ಮೂರು ಜನ ರೈತರನ್ನು ಬಲಿ ಪಡೆದು, ಒಬ್ಬ ರೈತನನ್ನ ಶಾಶ್ವತವಾಗಿ ಅಂದತ್ವವಾಗುತಂತೆ ದಾಳಿಯಾಗಿತ್ತು. ಇಷ್ಟೇ ಅಲ್ಲದೇ ಕಾಡಂಚಿನ ಗ್ರಾಮಗಳಲ್ಲಿ ದಿನವೂ ಎಂಬಂತೆ ಹಸು ಕರು ಮೇಕೆಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದ್ದವು ಇದನ್ನ ಮನಗಂಡ ಶಾಸಕರು ಮುಖ್ಯಮಂತ್ರಿಗಳ ಗಮನ ಸೆಳೆದು ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದರು ಮತ್ತು ಅರಣ್ಯ ಅಧಿಕಾರಿಗಳು ಮಾನವ ಪ್ರಾಣಿ ಸಂಘರ್ಷ ತಡೆಗೆ ಹಗಲು ರಾತ್ರಿ ನಿರಂತರವಾಗಿ ಕಾವಲು ಕಾಯುತ್ತಾ ಹುಲಿ ಸೆರೆಹಿಡಿಯುವ ಕಾರ್ಯಚರಣೆ ಕೈಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರು ಮೂಲದ ಶ್ರೀಧರ್ ಎಂಬುವರು ಜಾಲರಿ ಮೇಸ್ ಅನ್ನು ಕೊಡುಗೆ ನೀಡಿದ್ದಾರೆ. ಅದನ್ನ ಶಾಸಕರು ಮತ್ತು ಅರಣ್ಯ ಅಧಿಕಾರಿಗಳು ಪ್ರಯೋಗಿಕವಾಗಿ ರೈಲ್ವ ಕಂಬಿಗಳಿಗೆ ಜಾಲರಿ ಜೋಡಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಎಸಿಎಫ್ ಮಧುದೇವಯ್ಯ, ಆರ್.ಎಫ಼್.ಒ ಸಿದ್ದರಾಜ್, ರೈತ ಕಲ್ಯಾಣ ಸಂಘದ ಜಿಲ್ಲಾಧ್ಯಾಕ್ಷ ಚಂದನ್ ಗೌಡ, ಜಿಲ್ಲಾ ಪಂ ಮಾಜಿ ಸದಸ್ಯ ನರಸೀಪುರ ರವಿ, ಗ್ರಾಪಂ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತು ರೈತ ಮುಖಂಡರು ಇಲಾಖಾ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…