ಮೈಸೂರು

ಸ್ಪರ್ಧಾತ್ಮಕ ಪರೀಕ್ಷೆಗೆ ಆಸಕ್ತಿ ಮುಖ್ಯ : ಎ.ದೇವರಾಜು

ಮೈಸೂರು: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಆಸಕ್ತಿ ಬಹಳ ಮುಖ್ಯ ಎಂದು ಪುರಾತತ್ವ ಮತ್ತು ಪರಂಪರೆ ಇಲಾಖೆ ಆಯುಕ್ತ ಎ.ದೇವರಾಜು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ತರಬೇತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕಠಿಣಾವಾಗಿದೆ. ಪರೀಕ್ಷೆ ಎದುರಿಸಲು ತಯಾರಿ ಜೊತೆಗೆ ಅಸಕ್ತಿ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಹಿಂದೆಲ್ಲಾ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಇರುತ್ತಿರಲಿಲ್ಲ. ಆದರೆ ಇತ್ತೀಚಿಗೆ ತುಂಬಾ ತರಬೇತಿ ಸಂಸ್ಥೆಗಳಿವೆ. ಆದರೆ ದುಬಾರಿ ಶುಲ್ಕ ವಿದ್ಯಾರ್ಥಿಗಳಿಗೆ ಭರಿಸಲಾಗದೆ ತರಬೇತಿಗೆ ಪಡೆಯಲು ಆಗುತ್ತಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಮುಕ್ತ ವಿವಿಯ ತರಬೇತಿ ಬಹಳ ಪ್ರಯೋಜನಕಾರಿಯಾಗಿದೆ ಎಂದು ಶ್ಲಾಘಿಸಿದರು.

ವಿದ್ಯಾರ್ಥಿಗಳು ಶ್ರದ್ದೆ ಹಾಗೂ ಸತತ ನಿರಂತರ ಪ್ರಯತ್ನದಿಂದ ತಮ್ಮ ಗುರಿ ಮುಟ್ಟುವ ತನಕ ಅಭ್ಯಾಸವನ್ನು ಸಮಸ್ಯೆಗೆ ಹೆದರಿ ನಿಲ್ಲಿಸಬಾರದು. ಜೊತೆಗೆ ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗ ಮಾಡಿಕೊಳ್ಳಿ. ನಿಮ್ಮ ಶೈಕ್ಷಣಿಕ ಅರ್ಹತೆಗೆ ಪೂರಕವಾದ ಎಲ್ಲಾ ಪರೀಕ್ಷೆಗಳನ್ನು ಧೈರ್ಯವಾಗಿ ತೆಗೆದುಕೊಂಡು ಪರೀಕ್ಷೆಯನ್ನು ಹೆದರಿಸಿ ಎಂದು ಕಿವಿಮಾತು ಹೇಳಿದರು.

ಪರೀಕ್ಷೆ ಎದುರಿಸಲು ನಿಮ್ಮ ವೈಯಕ್ತಿಕ ಆಸಕ್ತಿ ಮುಖ್ಯವಾಗಿರಬೇಕೆ ಹೊರತು ಬೇರೆಯವರ ಒತ್ತಾಯಕ್ಕೆ ಓದಬಾರದು. ಪರೀಕ್ಷೆ ಬರೆಯುವವರೆಲ್ಲ ಪಾಸಾಗುವುದಿಲ್ಲ. 100 ಹುದ್ದೆಗೆ ಪರೀಕ್ಷೆ ನಡೆಸಿದರೆ ಸುಮಾರು 1 ಲಕ್ಷ ಜನರು ಪರೀಕ್ಷೆಯನ್ನು ಕೈಗೊಳ್ಳುತ್ತಾರೆ. ಅದರಲ್ಲಿ ಸತತವಾಗಿ ಅಭ್ಯಾಸ ನಡೆಸಿದವರಿಗೆ ಮಾತ್ರ ಕೆಲಸ ದೊರಕುತ್ತದೆ. ಆದ್ದರಿಂದ ನಿಮ್ಮ ಗುರಿ ಅಚಲವಾಗಿರಬೇಕು ಎಂದು ಹೇಳಿದರು.

ಪ್ರತಿಯೊಬ್ಬರೂ ಕೂಡ ನಿಮ್ಮ ಗುರಿಯನ್ನು ಪ್ರೀತಿಸಿ. ಎಲ್ಲರ ಬಳಿಯೂ ಮೊಬೈಲ್ ಇರುವುದರಿಂದ ಪ್ರಯಾಣ ಮಾಡುವಾಗ ಅಥವಾ ಇನ್ನಾವುದೇ ಸಮಯದಲ್ಲಿ ಪ್ರಚಲಿತ ಘಟನೆ, ನ್ಯೂಸ್ ಪೇಪರ್ ಹಾಗೂ ಇನ್ನಿತರ ವಿಷಯಗಳನ್ನು ತಿಳಿದುಕೊಳ್ಳಿ. ಸ್ಪರ್ಧಾತ್ಮಕ ಪ್ರಪಂಚದಲ್ಲಿ ಸ್ಪರ್ಧೆಗಳು ಹೆಚ್ಚಿದೆ. ಆದರೂ ಸಹ ಯಾರು ಎದೆಗುಂದದೆ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಮಾತನಡಿ ‘ಪ್ರಯತ್ನ ಪಟ್ಟರೆ ಪರಮಾತ್ಮನೇ ಸಿಗುವನು’ ಎಂಬ ಮಾತಿನಂತೆ ಪ್ರಯತ್ನದಿಂದ ಎಲ್ಲವೂ ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ತಮ್ಮ ಗುರಿಯನ್ನು ಮುಟ್ಟಬಹುದಾಗಿದೆ ಎಂದರು.

ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಇಂದು ಕಷ್ಟಪಟ್ಟರೆ ಮುಂದಿನ ನಿಮ್ಮ ಜೀವನ ಸುಖಕರವಾಗಿರುತ್ತದೆ. ಜೊತೆಗೆ ಸಮಾಜದಲ್ಲಿ ಉನ್ನತ ಗೌರವಗಳು ದೊರಕುತ್ತದೆ. ಎಲ್ಲಾ ಅಭ್ಯರ್ಥಿಗಳಿಗೂ ಓದಿನ ಹಸಿವಿರಬೇಕು. ಕಲಿಕೆ ಎಂಬುದು ದಿನನಿತ್ಯದ ಪಯಣವಾಗಿದೆ. ಎಲ್ಲರೂ ಉತ್ತಮ ಶ್ರದ್ದೆಯಿಂದ ಕಲಿಕೆಯನ್ನು ಮುಂದುವರಿಸಿ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

12 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

26 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

47 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago