ಮೈಸೂರು: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಆಸಕ್ತಿ ಬಹಳ ಮುಖ್ಯ ಎಂದು ಪುರಾತತ್ವ ಮತ್ತು ಪರಂಪರೆ ಇಲಾಖೆ ಆಯುಕ್ತ ಎ.ದೇವರಾಜು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ತರಬೇತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕಠಿಣಾವಾಗಿದೆ. ಪರೀಕ್ಷೆ ಎದುರಿಸಲು ತಯಾರಿ ಜೊತೆಗೆ ಅಸಕ್ತಿ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಹಿಂದೆಲ್ಲಾ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಇರುತ್ತಿರಲಿಲ್ಲ. ಆದರೆ ಇತ್ತೀಚಿಗೆ ತುಂಬಾ ತರಬೇತಿ ಸಂಸ್ಥೆಗಳಿವೆ. ಆದರೆ ದುಬಾರಿ ಶುಲ್ಕ ವಿದ್ಯಾರ್ಥಿಗಳಿಗೆ ಭರಿಸಲಾಗದೆ ತರಬೇತಿಗೆ ಪಡೆಯಲು ಆಗುತ್ತಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಮುಕ್ತ ವಿವಿಯ ತರಬೇತಿ ಬಹಳ ಪ್ರಯೋಜನಕಾರಿಯಾಗಿದೆ ಎಂದು ಶ್ಲಾಘಿಸಿದರು.
ವಿದ್ಯಾರ್ಥಿಗಳು ಶ್ರದ್ದೆ ಹಾಗೂ ಸತತ ನಿರಂತರ ಪ್ರಯತ್ನದಿಂದ ತಮ್ಮ ಗುರಿ ಮುಟ್ಟುವ ತನಕ ಅಭ್ಯಾಸವನ್ನು ಸಮಸ್ಯೆಗೆ ಹೆದರಿ ನಿಲ್ಲಿಸಬಾರದು. ಜೊತೆಗೆ ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗ ಮಾಡಿಕೊಳ್ಳಿ. ನಿಮ್ಮ ಶೈಕ್ಷಣಿಕ ಅರ್ಹತೆಗೆ ಪೂರಕವಾದ ಎಲ್ಲಾ ಪರೀಕ್ಷೆಗಳನ್ನು ಧೈರ್ಯವಾಗಿ ತೆಗೆದುಕೊಂಡು ಪರೀಕ್ಷೆಯನ್ನು ಹೆದರಿಸಿ ಎಂದು ಕಿವಿಮಾತು ಹೇಳಿದರು.
ಪರೀಕ್ಷೆ ಎದುರಿಸಲು ನಿಮ್ಮ ವೈಯಕ್ತಿಕ ಆಸಕ್ತಿ ಮುಖ್ಯವಾಗಿರಬೇಕೆ ಹೊರತು ಬೇರೆಯವರ ಒತ್ತಾಯಕ್ಕೆ ಓದಬಾರದು. ಪರೀಕ್ಷೆ ಬರೆಯುವವರೆಲ್ಲ ಪಾಸಾಗುವುದಿಲ್ಲ. 100 ಹುದ್ದೆಗೆ ಪರೀಕ್ಷೆ ನಡೆಸಿದರೆ ಸುಮಾರು 1 ಲಕ್ಷ ಜನರು ಪರೀಕ್ಷೆಯನ್ನು ಕೈಗೊಳ್ಳುತ್ತಾರೆ. ಅದರಲ್ಲಿ ಸತತವಾಗಿ ಅಭ್ಯಾಸ ನಡೆಸಿದವರಿಗೆ ಮಾತ್ರ ಕೆಲಸ ದೊರಕುತ್ತದೆ. ಆದ್ದರಿಂದ ನಿಮ್ಮ ಗುರಿ ಅಚಲವಾಗಿರಬೇಕು ಎಂದು ಹೇಳಿದರು.
ಪ್ರತಿಯೊಬ್ಬರೂ ಕೂಡ ನಿಮ್ಮ ಗುರಿಯನ್ನು ಪ್ರೀತಿಸಿ. ಎಲ್ಲರ ಬಳಿಯೂ ಮೊಬೈಲ್ ಇರುವುದರಿಂದ ಪ್ರಯಾಣ ಮಾಡುವಾಗ ಅಥವಾ ಇನ್ನಾವುದೇ ಸಮಯದಲ್ಲಿ ಪ್ರಚಲಿತ ಘಟನೆ, ನ್ಯೂಸ್ ಪೇಪರ್ ಹಾಗೂ ಇನ್ನಿತರ ವಿಷಯಗಳನ್ನು ತಿಳಿದುಕೊಳ್ಳಿ. ಸ್ಪರ್ಧಾತ್ಮಕ ಪ್ರಪಂಚದಲ್ಲಿ ಸ್ಪರ್ಧೆಗಳು ಹೆಚ್ಚಿದೆ. ಆದರೂ ಸಹ ಯಾರು ಎದೆಗುಂದದೆ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಮಾತನಡಿ ‘ಪ್ರಯತ್ನ ಪಟ್ಟರೆ ಪರಮಾತ್ಮನೇ ಸಿಗುವನು’ ಎಂಬ ಮಾತಿನಂತೆ ಪ್ರಯತ್ನದಿಂದ ಎಲ್ಲವೂ ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ತಮ್ಮ ಗುರಿಯನ್ನು ಮುಟ್ಟಬಹುದಾಗಿದೆ ಎಂದರು.
ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಇಂದು ಕಷ್ಟಪಟ್ಟರೆ ಮುಂದಿನ ನಿಮ್ಮ ಜೀವನ ಸುಖಕರವಾಗಿರುತ್ತದೆ. ಜೊತೆಗೆ ಸಮಾಜದಲ್ಲಿ ಉನ್ನತ ಗೌರವಗಳು ದೊರಕುತ್ತದೆ. ಎಲ್ಲಾ ಅಭ್ಯರ್ಥಿಗಳಿಗೂ ಓದಿನ ಹಸಿವಿರಬೇಕು. ಕಲಿಕೆ ಎಂಬುದು ದಿನನಿತ್ಯದ ಪಯಣವಾಗಿದೆ. ಎಲ್ಲರೂ ಉತ್ತಮ ಶ್ರದ್ದೆಯಿಂದ ಕಲಿಕೆಯನ್ನು ಮುಂದುವರಿಸಿ ಎಂದು ತಿಳಿಸಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…