ಮೈಸೂರು

ಒಳ ಮೀಸಲಾತಿ | ಎಡಗೈಗೂ 6, ಬಲಗೈಗೂ 6 ; ಏನ್‌ ಈ ಹೊಸ ಸೂತ್ರ? ಇಲ್ಲಿದೆ ವಿವರ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹಗಳಿಗೆ ಮನ್ನಣೆ ನೀಡಿರುವ ರಾಜ್ಯ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ಎಚ್. ಎನ್‌ ನಾಗಮೋಹನ್‌ದಾಸ್‌ ಆಯೋಗ ಸಲ್ಲಿಸಿರುವ ವರದಿಯಲ್ಲಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ಬಗ್ಗೆ ಎರಡು ದಿನಗಳಲ್ಲಿ ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ.

101 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಾಗಿ ಅಂದರೆ ಎಡಗೈ, ಬಲಗೈ ಮತ್ತು ಸ್ಪಶ್ಯ ಎಂದು ವರ್ಗೀಕರಿಸಲು ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಪರಿಶಿಷ್ಟ ಜಾತಿಯವರಿಗೆ ಶೇ 17ರಷ್ಟಿರುವ ಮೀಸಲಾತಿಯನ್ನು ಎಡಗೈ ಮತ್ತು ಬಲಗೈ ಸಂಬಂಧಿತ ಜಾತಿಗಳ ಗುಂಪಿಗೆ ತಲಾ ಶೇ 6, ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನು ಒಳಗೊಂಡ ಸ್ಪೃಶ್ಯ’ ಗುಂಪುಗಳಿಗೆ ಶೇ 5 ಮೀಸಲಾತಿ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ.

ಪರಿಶಿಷ್ಟ ಜಾತಿಯಲ್ಲಿ 101 ಮೂಲ ಜಾತಿಗಳನ್ನು ಆಯೋಗವು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯವಿರುವ ಶೇ 17 ಮೀಸಲಾತಿಯನ್ನು ಪ್ರವರ್ಗ ‘ಎ’ಗೆ ಶೇ 1 (ಒಟ್ಟು ಜಾತಿಗಳು 59 ಜಾತಿಗಳು), ಪ್ರವರ್ಗ ‘ಬಿ’ಗೆ ಶೇ 6 (18 ಜಾತಿಗಳು), ಪ್ರವರ್ಗ ‘ಸಿ’ಗೆ ಶೇ 5 (17 ಜಾತಿಗಳು), ಪ್ರವರ್ಗ ‘ಡಿ’ಗೆ ಶೇ 4 (4 ಜಾತಿಗಳು), ಪ್ರವರ್ಗ ‘ಇ’ಗೆ ಶೇ 1ರಂತೆ (3 ಜಾತಿಗಳು) ಹಂಚಿಕೆ ಮಾಡಿತ್ತು. ಆಯೋಗದ ವರದಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಿದ್ಧಪಡಿಸಿದ್ದ ಟಿಪ್ಪಣಿಯನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಅವರು ಸಚಿವ ಸಂಪುಟ ಸಭೆಯಲ್ಲಿ ವಿವರಿಸಿದರು ಎಂದು ಮೂಲಗಳು ತಿಳಿಸಿವೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡಲು ರಾಜ್ಯದಾದ್ಯಂತ ನಡೆದ ಸಮೀಕ್ಷೆಯ ದತ್ತಾಂಶಗಳ ಕುರಿತಂತೆ ಆಯೋಗದ ವರದಿಯಲ್ಲಿರುವ ಅಂಶಗಳ ಪ್ರಾತ್ಯಕ್ಷಿಕೆ ನೀಡಿದ ಮಣಿವಣ್ಣನ್, ಎಲ್ಲರನ್ನು ಸಮನಾಗಿ ಕಾಣುವ ಸಾಮಾಜಿಕ ನ್ಯಾಯದ ವರದಿ ಬಂದಿದೆ ಎಂದು ಸಭೆಗೆ ಮಾಹಿತಿ ನೀಡಿದರು ಎಂದು ಗೊತ್ತಾಗಿದೆ.

ನಮಗೂ ಸಮಾನ ಮೀಸಲಾತಿ ಇರಲಿ ಎಂದು ಬಲಗೈ ಸಮುದಾಯದ ಜಿ. ಪರಮೇಶ್ವರ ಮತ್ತು ಎಚ್.ಸಿ. ಮಹದೇವಪ್ಪ ಅವರು ಸಭೆಯಲ್ಲಿ ಕೋರಿಕೆ ಮುಂದಿಟ್ಟರೆ, ನಾವೂ ದಲಿತರೆ. ಉಪ ಜಾತಿಗಳಿಗೆ ಮೀಸಲಾತಿ ಹಂಚಿಕೆ ವೇಳೆ ಭೋವಿ ಸಮುದಾಯಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು ಎಂದು ಬೋವಿ ಸಮುದಾಯದ ಶಿವರಾಜ್ ತಂಗಡಗಿ ಹೇಳಿದರು ಎಂದು ಗೊತ್ತಾಗಿದೆ.

ನಮ್ಮದು ಜಾತಿ ಪ್ರಮಾಣಪತ್ರ ಕೇಳುತ್ತಾರೆ. ಆದರೆ. ಮೂಲ ಜಾತಿ ಗೊತ್ತಿಲ್ಲದ ಕಾರಣಕ್ಕೆ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ನಮೂದಿಸಿದ್ದಾರೆ. ಈ ಗೊಂದಲ ಮೊದಲು ಬಗೆಹರಿಯಲಿ ಎಂದು ಪರಮೇಶ್ವರ ಸಲಹೆ ನೀಡಿದರು ಎಂದು ಗೊತ್ತಾಗಿದೆ.

ನಾಗಮೋಹನದಾಸ್‌ ಆಯೋಗ ಮಾಡಿರುವ ಜಾತಿಗಳ ವರ್ಗೀಕರಣದ ಬಗ್ಗೆ ವಿಸ್ತಾರವಾಗಿ ಚರ್ಚಿಸುವ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆಯು ಸಚಿವ ಸಂಪುಟ ಸಭೆಗೆ ಟಿಪ್ಪಣಿ ನೀಡಿತ್ತು.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

9 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

9 hours ago