ಮೈಸೂರು

ಒಳ ಮೀಸಲಾತಿ | ಎಡಗೈಗೂ 6, ಬಲಗೈಗೂ 6 ; ಏನ್‌ ಈ ಹೊಸ ಸೂತ್ರ? ಇಲ್ಲಿದೆ ವಿವರ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹಗಳಿಗೆ ಮನ್ನಣೆ ನೀಡಿರುವ ರಾಜ್ಯ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ಎಚ್. ಎನ್‌ ನಾಗಮೋಹನ್‌ದಾಸ್‌ ಆಯೋಗ ಸಲ್ಲಿಸಿರುವ ವರದಿಯಲ್ಲಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ಬಗ್ಗೆ ಎರಡು ದಿನಗಳಲ್ಲಿ ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ.

101 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಾಗಿ ಅಂದರೆ ಎಡಗೈ, ಬಲಗೈ ಮತ್ತು ಸ್ಪಶ್ಯ ಎಂದು ವರ್ಗೀಕರಿಸಲು ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಪರಿಶಿಷ್ಟ ಜಾತಿಯವರಿಗೆ ಶೇ 17ರಷ್ಟಿರುವ ಮೀಸಲಾತಿಯನ್ನು ಎಡಗೈ ಮತ್ತು ಬಲಗೈ ಸಂಬಂಧಿತ ಜಾತಿಗಳ ಗುಂಪಿಗೆ ತಲಾ ಶೇ 6, ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನು ಒಳಗೊಂಡ ಸ್ಪೃಶ್ಯ’ ಗುಂಪುಗಳಿಗೆ ಶೇ 5 ಮೀಸಲಾತಿ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ.

ಪರಿಶಿಷ್ಟ ಜಾತಿಯಲ್ಲಿ 101 ಮೂಲ ಜಾತಿಗಳನ್ನು ಆಯೋಗವು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯವಿರುವ ಶೇ 17 ಮೀಸಲಾತಿಯನ್ನು ಪ್ರವರ್ಗ ‘ಎ’ಗೆ ಶೇ 1 (ಒಟ್ಟು ಜಾತಿಗಳು 59 ಜಾತಿಗಳು), ಪ್ರವರ್ಗ ‘ಬಿ’ಗೆ ಶೇ 6 (18 ಜಾತಿಗಳು), ಪ್ರವರ್ಗ ‘ಸಿ’ಗೆ ಶೇ 5 (17 ಜಾತಿಗಳು), ಪ್ರವರ್ಗ ‘ಡಿ’ಗೆ ಶೇ 4 (4 ಜಾತಿಗಳು), ಪ್ರವರ್ಗ ‘ಇ’ಗೆ ಶೇ 1ರಂತೆ (3 ಜಾತಿಗಳು) ಹಂಚಿಕೆ ಮಾಡಿತ್ತು. ಆಯೋಗದ ವರದಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಿದ್ಧಪಡಿಸಿದ್ದ ಟಿಪ್ಪಣಿಯನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಅವರು ಸಚಿವ ಸಂಪುಟ ಸಭೆಯಲ್ಲಿ ವಿವರಿಸಿದರು ಎಂದು ಮೂಲಗಳು ತಿಳಿಸಿವೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡಲು ರಾಜ್ಯದಾದ್ಯಂತ ನಡೆದ ಸಮೀಕ್ಷೆಯ ದತ್ತಾಂಶಗಳ ಕುರಿತಂತೆ ಆಯೋಗದ ವರದಿಯಲ್ಲಿರುವ ಅಂಶಗಳ ಪ್ರಾತ್ಯಕ್ಷಿಕೆ ನೀಡಿದ ಮಣಿವಣ್ಣನ್, ಎಲ್ಲರನ್ನು ಸಮನಾಗಿ ಕಾಣುವ ಸಾಮಾಜಿಕ ನ್ಯಾಯದ ವರದಿ ಬಂದಿದೆ ಎಂದು ಸಭೆಗೆ ಮಾಹಿತಿ ನೀಡಿದರು ಎಂದು ಗೊತ್ತಾಗಿದೆ.

ನಮಗೂ ಸಮಾನ ಮೀಸಲಾತಿ ಇರಲಿ ಎಂದು ಬಲಗೈ ಸಮುದಾಯದ ಜಿ. ಪರಮೇಶ್ವರ ಮತ್ತು ಎಚ್.ಸಿ. ಮಹದೇವಪ್ಪ ಅವರು ಸಭೆಯಲ್ಲಿ ಕೋರಿಕೆ ಮುಂದಿಟ್ಟರೆ, ನಾವೂ ದಲಿತರೆ. ಉಪ ಜಾತಿಗಳಿಗೆ ಮೀಸಲಾತಿ ಹಂಚಿಕೆ ವೇಳೆ ಭೋವಿ ಸಮುದಾಯಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು ಎಂದು ಬೋವಿ ಸಮುದಾಯದ ಶಿವರಾಜ್ ತಂಗಡಗಿ ಹೇಳಿದರು ಎಂದು ಗೊತ್ತಾಗಿದೆ.

ನಮ್ಮದು ಜಾತಿ ಪ್ರಮಾಣಪತ್ರ ಕೇಳುತ್ತಾರೆ. ಆದರೆ. ಮೂಲ ಜಾತಿ ಗೊತ್ತಿಲ್ಲದ ಕಾರಣಕ್ಕೆ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ನಮೂದಿಸಿದ್ದಾರೆ. ಈ ಗೊಂದಲ ಮೊದಲು ಬಗೆಹರಿಯಲಿ ಎಂದು ಪರಮೇಶ್ವರ ಸಲಹೆ ನೀಡಿದರು ಎಂದು ಗೊತ್ತಾಗಿದೆ.

ನಾಗಮೋಹನದಾಸ್‌ ಆಯೋಗ ಮಾಡಿರುವ ಜಾತಿಗಳ ವರ್ಗೀಕರಣದ ಬಗ್ಗೆ ವಿಸ್ತಾರವಾಗಿ ಚರ್ಚಿಸುವ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆಯು ಸಚಿವ ಸಂಪುಟ ಸಭೆಗೆ ಟಿಪ್ಪಣಿ ನೀಡಿತ್ತು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

38 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago